ಮಹಾಬಲಿಪುರಂ: ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಅನೌಪಚಾರಿಕ ಶೃಂಗಸಭೆಗಾಗಿ ತಮಿಳುನಾಡಿನ ಮಹಾಬಲಿಪುರಂನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಬೀಚ್ನಲ್ಲಿ ಸ್ವಚ್ಛತಾಕಾರ್ಯ ನಡೆಸಿದ್ದಾರೆ.
ಬೆಳಗ್ಗೆ ಮಹಾಬಲಿಪುರಂ ಬೀಚ್ನಲ್ಲಿ ವಾಕಿಂಗ್ ಮಾಡುತಿದ್ದ ಪ್ರಧಾನಿ ಮೋದಿ ಬೀಚ್ ದಡದಲ್ಲಿ ಕಸಗಳಿರುವುದನ್ನ ಕಂಡು ಸ್ವತಃ ತಾವೇ ಕಸಗಳನ್ನ ಆರಿಸಿಕೊಂಡು ಒಂದು ಕವರ್ಗೆ ಹಾಕಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ಬೀಚ್ ಬಳಿ ಸುಮಾರು 30 ನಿಮಿಷ ಕಾಲ ಕಳೆದ ನಾನು ಕಸವನ್ನ ಆರಿಸಿಕೊಂಡು, ತಾವು ತಂಗಿದ್ದ ಹೋಟೆಲ್ ಸಿಬ್ಬಂದಿ ಜಯರಾಜ್ಗೆ ನೀಡಿದ್ದೇನೆ. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆ ಕಾಪಡಬೇಕು. ಈ ಮೂಲಕ ನಾವು ಕೂಡ ಆರೋಗ್ಯವಂತರಾಗಿರಬೇಕು ಎಂದು ಬರೆದುಕೊಂಡಿದ್ದಾರೆ. ಬೀಚ್ನಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿದ ಈ ವಿಡಿಯೋ ಇದೀಗ ವೈರಲ್ ಆಗಿದೆ.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…