ಮಂಗಳೂರು: ಕರಾವಳಿ ಭಾಗದ ಬಡಜನರ ಮೂಲಕಸುಬಾದ ಬೀಡಿ ಉದ್ಯಮಕ್ಕೆ ಯಾವುದೇ ರೀತಿಯ ತೆರಿಗೆ ವಿಧಿಸದಂತೆ ಕೋರಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರಿಗೆ ಯೂನಿಯನ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಡಿ.ವಿ ಸದಾನಂದ ಗೌಡರು ಈ ಬಗ್ಗೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಬಳಿ ಮಾತನಾಡಲಾಗಿದ್ದು ಈ ಸಂಬಂಧ ನಿರ್ಮಲಾ ಸೀತಾರಾಮನ್ ರವರು ಸಭೆ ಕರೆದಿರುವುದಾಗಿ ತಿಳಿಸಿರುತ್ತಾರೆ. ಮುಂದಿನ ಬಜೆಟ್ ನಲ್ಲಿ ಬೀಡಿ ಉದ್ಯಮಕ್ಕೆ ತೆರಿಗೆಯಿಂದ ವಿನಾಯಿತಿ ಮತ್ತು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಭರವಸೆಯನ್ನು ಡಿ.ವಿ ಸದಾನಂದ ಗೌಡರು ನೀಡಿದರು.
ಈ ಸಂದರ್ಭದಲ್ಲಿ ಉದ್ಯಮಿ,ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಯೂನಿಯನ್ ನ ಮುರಳೀಧರ ಶೆಟ್ಟಿ, ಜಲೀಲ್ ಉಪಸ್ಥಿತರಿದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…