Advertisement

ಬುಧವಾರವೂ ನಮಗೆ ಶುಭವಾರ್ತೆ | ದಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ನೆಗೆಟಿವ್ ವರದಿ | ಉಡುಪಿ- ಕಾಸರಗೋಡಿನಲ್ಲೂ ಯಾವುದೇ ಪ್ರಕರಣವಿಲ್ಲ |

Share

ಮಂಗಳೂರು: ದ. ಕ. ಜಿಲ್ಲೆಯಲ್ಲಿ ಬುಧವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಹೀಗಾಗಿ ಸತತ 11 ದಿನಗಳಿಂದ ಕೊರೊನಾ ವೈರಸ್ ಹೊಸಪ್ರಕರಣಗಳು ಇಲ್ಲದೇ ಇರುವುದು ಜಿಲ್ಲೆಯ ಮಟ್ಟಿಗೆ ಶುಭವಾರ್ತೆ. ಈ ನಡುವೆ ಜಿಲ್ಲೆಯಲ್ಲಿ 12 ಜನ ಸೋಂಕಿತರಲ್ಲಿ 9 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಬುಧವಾರ ಸುಮಾರು 42 ಮಂದಿಯ ಪರೀಕ್ಷಾ ಮಾದರಿಗಳು ಲಭ್ಯವಾಗಿದ್ದು, ಎಲ್ಲವೂ ನೆಗೆಟಿವ್ ಆಗಿದೆ. ಇನ್ನು ಇದೇ ದಿನ 15 ಮಂದಿಯನ್ನು ನಿಗಾದಲ್ಲಿರಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದುವರೆಗೆ 658 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವರ ಪೈಕಿ 511 ಮಂದಿಯ ವರದಿ ಲಭ್ಯವಾಗಿದೆ. 498 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು 25 ಮಂದಿ ಇ ಎಸ್ ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ. ಬುಧವಾರದಂದು 22 ಮಂದಿಯ ಮಾದರಿಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ದಾಖಲಾದ ಕೇವಲ ಮೂವರು ಕೊರೊನಾ ಸೋಂಕಿತರಲ್ಲಿ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇನ್ನೊಬ್ಬರು ಚಿತ್ಸೆಯಲ್ಲಿದ್ದಾರೆ.

ರಾಜ್ಯದಲ್ಲಿ ಬುಧವಾರ ಒಂದೇ ದಿನವೇ ಒಟ್ಟು 19 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 279 ಸೋಂಕಿತರಲ್ಲಿ ಈಗಾಗಲೇ 80 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಇಂದು ಯಾವುದೇ ಕೊರೊನಾ ಪ್ರಕರಣ ವರದಿಯಾಗಿಲ್ಲ. ಈ ನಡುವೆ ಬುಧವಾರ ಇಡೀ ಕೇರಳದಲ್ಲಿ ಕೇವಲ ಒಂದೇ ಒಂದು ಪ್ರಕರಣ ದಾಖಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಇದುವರೆಗೆ 83 ಮಂದಿ ಗುಣಮುಖರಾಗಿದ್ದು, ಇನ್ನು 84 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…

3 hours ago

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…

3 hours ago

ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…

4 hours ago

ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ

ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…

4 hours ago

ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಮಂಜೂರು – ಸಂಚಾರ ಸುಗಮ, ಪ್ರವಾಸೋದ್ಯಮಕ್ಕೂ ಉತ್ತೇಜನ

ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…

4 hours ago

ಹೊಳೆಹೊನ್ನೂರು ಅಡಿಕೆ ಕಳ್ಳತನ ದೊಡ್ಡ ಬೇಟೆ – 350 ಚೀಲ ಅಡಿಕೆ, ಲಾರಿ ವಶ – ಆರೋಪಿಗಳು ಪರಾರಿ

ಹೊಳೆಹೊನ್ನೂರಿನಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ 350 ಚೀಲ ಅಡಿಕೆ ಮತ್ತು ಲಾರಿಯನ್ನು…

4 hours ago