Advertisement
ಸುದ್ದಿಗಳು

ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯದ ಎನ್ ಎಸ್ .ಯು.ಐ.ಉಸ್ತುವಾರಿಯಾಗಿ ಸಿ.ವಿ. ಆದಿಲ್ ಅಲಿ ಆಯ್ಕೆ

Share

ಸುಳ್ಯ: ದೆಹಲಿಯ ಎನ್.ಎಸ್.ಯು.ಐ ಸಂದರ್ಶನದಲ್ಲಿ ದೇಶಾದ್ಯಂತ ಆಯ್ದ 2500 ವಿದ್ಯಾರ್ಥಿ ನಾಯಕರಲ್ಲಿ 200 ವಿದ್ಯಾರ್ಥಿ ನಾಯಕರನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯಕ್ಕೆ ಎನ್.ಎಸ್.ಯು.ಐನ ಉಸ್ತುವಾರಿಯನ್ನಾಗಿ ಸಿ.ವಿ ಆದಿಲ್ ಅಲಿ ಇವರನ್ನು ರಾಷ್ಟೀಯ ಎನ್.ಎಸ್.ಯು.ಐ ಅಧ್ಯಕ್ಷ ನೀರಾಜ್ ಕುಂದನ್ ಆಯ್ಕೆ ಮಾಡಿರುತ್ತಾರೆ.

ಇವರು ಕಲ್ಲಿಕೋಟೆ ಸಿ.ವಿ.ರಾಫಿ ಹಾಗೂ ಅರಂತೋಡಿನ ರಾಜ್ಯ ನಾಯಕರಾದ ಟಿ.ಎಮ್ .ಶಹೀದ್ ತೆಕ್ಕಿಲ್ ರವರ ಸಹೋದರಿ ಟಿ.ಎಮ್ ಜಾಹಿರಾ ಬಿ ತೆಕ್ಕಿಲ್ ಇವರ ಪುತ್ರನಾಗಿದ್ದು ಅರಂತೋಡಿನಲ್ಲಿ ಹುಟ್ಟಿ ಬೆಳೆದ ಇವರು ಕ್ಯಾಲಿಕಟ್ ಲಾ ಕಾಲೇಜಿನ ಕಾನೂನು ಪದವಿ ವಿದ್ಯಾರ್ಥಿ ಆಗಿದ್ದಾರೆ. ಕಾನೂನು ವಿದ್ಯಾರ್ಥಿಯಾಗಿರುವಾಗಲೇ ಅನೇಕ ಜನಪರ ಹೋರಾಟ ಮಾಡಿದ್ದು ಗ್ರಾಹಕರ ವ್ಯಾಜ್ಯ ಪರಿಹಾರಕ್ಕಾಗಿ ನ್ಯಾಯಾಲಯದಲ್ಲಿ ವಾದವನ್ನು ಮಂಡಿಸಿ ವಿಜಯವಾಗಿ ಕೇರಳ ರಾಜ್ಯಾದ್ಯಂತ ಹೆಸರು ವಾಸಿಯಾಗಿರುತ್ತಾರೆ. ಅಲ್ಲದೇ ಅಲಿಯಾ ಹಯಾರ್ ಸೆಕೆಂಡರಿ ಸ್ಕೂಲ್ ಕಾಸರಗೋಡಿನ ವಿದ್ಯಾರ್ಥಿ ನಾಯಕನಾಗಿ ನೆಹರು ಯುವ ಕೇಂದ್ರ ಕ್ಯಾಲಿಕಟ್ ಸದಸ್ಯನಾಗಿ ಕೇರಳ ರಾಜ್ಯದ ಯುತ್ ಕಮಿಷನ್ ಕ್ವಾಡಿನಟರಿರಾಗಿ ಕ್ಯಾಲಿಕಟ್ ಜಿಲ್ಲಾ ಕೆ.ಎಸ್.ಯು ನ ಕಾರ್ಯದರ್ಶಿಯಾಗಿ ಮತ್ತು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕರಾಗಿರುತ್ತಾರೆ. ಅಲ್ಲದೆ ಕಳೆದ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಪರವಾಗಿ ಕೆಲಸವನ್ನು ನಿರ್ವಹಿಸಿರುತ್ತಾರೆ .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

3 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

12 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

13 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

17 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

18 hours ago