Advertisement
ಸುದ್ದಿಗಳು

ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯದ ಎನ್ ಎಸ್ .ಯು.ಐ.ಉಸ್ತುವಾರಿಯಾಗಿ ಸಿ.ವಿ. ಆದಿಲ್ ಅಲಿ ಆಯ್ಕೆ

Share

ಸುಳ್ಯ: ದೆಹಲಿಯ ಎನ್.ಎಸ್.ಯು.ಐ ಸಂದರ್ಶನದಲ್ಲಿ ದೇಶಾದ್ಯಂತ ಆಯ್ದ 2500 ವಿದ್ಯಾರ್ಥಿ ನಾಯಕರಲ್ಲಿ 200 ವಿದ್ಯಾರ್ಥಿ ನಾಯಕರನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯಕ್ಕೆ ಎನ್.ಎಸ್.ಯು.ಐನ ಉಸ್ತುವಾರಿಯನ್ನಾಗಿ ಸಿ.ವಿ ಆದಿಲ್ ಅಲಿ ಇವರನ್ನು ರಾಷ್ಟೀಯ ಎನ್.ಎಸ್.ಯು.ಐ ಅಧ್ಯಕ್ಷ ನೀರಾಜ್ ಕುಂದನ್ ಆಯ್ಕೆ ಮಾಡಿರುತ್ತಾರೆ.

ಇವರು ಕಲ್ಲಿಕೋಟೆ ಸಿ.ವಿ.ರಾಫಿ ಹಾಗೂ ಅರಂತೋಡಿನ ರಾಜ್ಯ ನಾಯಕರಾದ ಟಿ.ಎಮ್ .ಶಹೀದ್ ತೆಕ್ಕಿಲ್ ರವರ ಸಹೋದರಿ ಟಿ.ಎಮ್ ಜಾಹಿರಾ ಬಿ ತೆಕ್ಕಿಲ್ ಇವರ ಪುತ್ರನಾಗಿದ್ದು ಅರಂತೋಡಿನಲ್ಲಿ ಹುಟ್ಟಿ ಬೆಳೆದ ಇವರು ಕ್ಯಾಲಿಕಟ್ ಲಾ ಕಾಲೇಜಿನ ಕಾನೂನು ಪದವಿ ವಿದ್ಯಾರ್ಥಿ ಆಗಿದ್ದಾರೆ. ಕಾನೂನು ವಿದ್ಯಾರ್ಥಿಯಾಗಿರುವಾಗಲೇ ಅನೇಕ ಜನಪರ ಹೋರಾಟ ಮಾಡಿದ್ದು ಗ್ರಾಹಕರ ವ್ಯಾಜ್ಯ ಪರಿಹಾರಕ್ಕಾಗಿ ನ್ಯಾಯಾಲಯದಲ್ಲಿ ವಾದವನ್ನು ಮಂಡಿಸಿ ವಿಜಯವಾಗಿ ಕೇರಳ ರಾಜ್ಯಾದ್ಯಂತ ಹೆಸರು ವಾಸಿಯಾಗಿರುತ್ತಾರೆ. ಅಲ್ಲದೇ ಅಲಿಯಾ ಹಯಾರ್ ಸೆಕೆಂಡರಿ ಸ್ಕೂಲ್ ಕಾಸರಗೋಡಿನ ವಿದ್ಯಾರ್ಥಿ ನಾಯಕನಾಗಿ ನೆಹರು ಯುವ ಕೇಂದ್ರ ಕ್ಯಾಲಿಕಟ್ ಸದಸ್ಯನಾಗಿ ಕೇರಳ ರಾಜ್ಯದ ಯುತ್ ಕಮಿಷನ್ ಕ್ವಾಡಿನಟರಿರಾಗಿ ಕ್ಯಾಲಿಕಟ್ ಜಿಲ್ಲಾ ಕೆ.ಎಸ್.ಯು ನ ಕಾರ್ಯದರ್ಶಿಯಾಗಿ ಮತ್ತು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕರಾಗಿರುತ್ತಾರೆ. ಅಲ್ಲದೆ ಕಳೆದ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಪರವಾಗಿ ಕೆಲಸವನ್ನು ನಿರ್ವಹಿಸಿರುತ್ತಾರೆ .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

6 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

7 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

8 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

13 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

16 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

20 hours ago