ಬೆಟ್ಟ ಕುಸಿಯುವ ಆತಂಕ : ವಿರಾಜಪೇಟೆ ರಸ್ತೆ ವಿಸ್ತರಣೆಗೆ ಆಕ್ಷೇಪ : ಸಾರ್ವಜನಿಕರಿಂದ ಪ್ರತಿಭಟನೆ

October 3, 2019
7:53 PM

ಮಡಿಕೇರಿ: ರಸ್ತೆ ವಿಸ್ತರಣೆಯ ನೆಪದಲ್ಲಿ ವಿರಾಜಪೇಟೆ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಕಾಮಗಾರಿಗೆ ಮುಂದಾಗಿದೆ ಎಂದು ಆರೋಪಿಸಿ ವಿವಿಧ ಬಡಾವಣೆಗಳ ಕಟ್ಟಡ ಮಾಲಕರು, ನಿವಾಸಿಗಳು, ವಕೀಲರು ಹಾಗೂ ವರ್ತಕರು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

Advertisement
Advertisement

ಸುಂಕದಕಟ್ಟೆಯಿಂದ ಮೀನುಪೇಟೆಯವರೆಗೆ ರಸ್ತೆ ವಿಸ್ತರಣೆಗೆ ಯೋಜನೆ ರೂಪಿಸಿರುವ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಯೋಜನೆಯ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ತಾಲೂಕು ಕಚೇರಿ ಎದುರು ಆರೋಪಿಸಿದರು.  ಜುಲೈ ತಿಂಗಳಿನಲ್ಲಿ ರಸ್ತೆ ವಿಸ್ತರಣೆ ಸಂಬಂಧ ಸರ್ವೆ ಕಾರ್ಯ ನಡೆಸಿ ಕಟ್ಟಡಗಳ ತೆರವು ಕಾರ್ಯಾಚರಣೆ ಕುರಿತು ಅಧಿಕಾರಿಗಳು ಮುನ್ಸೂಚನೆ ನೀಡಿದ್ದರು. ಆದರೆ ಕಟ್ಟಡ ಮಾಲಕರುಗಳಿಗೆ ಸರಕಾರದ ನಿಯಮದಂತೆ ಪರಿಹಾರ ಒದಗಿಸುವ ಬಗ್ಗೆ ಎಲ್ಲೂ ಪ್ರಸ್ತಾಪಿಸಿಲ್ಲವೆಂದು ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು.

ಸುಮಾರು 200 ವರ್ಷಗಳ ಇತಿಹಾಸ ಹೊಂದಿರುವ ವೀರರಾಜೇಂದ್ರ ಪೇಟೆಯನ್ನು ಅಭಿವೃದ್ಧಿ ಹೆಸರಿನಲ್ಲಿ ಹದಗೆಡಿಸಲಾಗುತ್ತಿದೆ. ಮಲೆತಿರಿಕೆ ಬೆಟ್ಟವನ್ನು ಕೊರೆದು ರಸ್ತೆ ವಿಸ್ತರಣೆ ಮಾಡಿದರೆ ಮಣ್ಣು ಸಡಿಲಗೊಂಡು ಪೂರ್ಣ ಪ್ರಮಾಣದಲ್ಲಿ ಬೆಟ್ಟ ಕುಸಿದು ಪಟ್ಟಣವನ್ನು ಆವರಿಸುವ ಆತಂಕವಿದೆ ಎಂದು ಹಿರಿಯರಾದ ಡಾ.ಐ.ಅರ್.ದುರ್ಗಪ್ರಸಾದ್ ಗಮನ ಸೆಳೆದರು.

ಕಟ್ಟಡ ಮಾಲಕರಿಗೆ ಪರಿಹಾರ ನೀಡಿದ ನಂತರ ರಸ್ತೆ ವಿಸ್ತರಣೆ ಮಾಡಬೇಕೆನ್ನುವ ನಿಯಮವಿದೆ. ಆದರೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಅದೇಶಗಳನ್ನು ಗಾಳಿಗೆ ತೂರಿ ರಸ್ತೆ ವಿಸ್ತರಣೆಗೆ ಮುಂದಾಗಿದ್ದಾರೆ ಎಂದು ವಕೀಲ ರವೀಂದ್ರಕಾಮತ್ ಆರೋಪಿಸಿದರು.  ವಕೀಲ ಟಿ.ಪಿ.ಕೃಷ್ಣ ಅವರು ಮಾತನಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಜವರೇಗೌಡ ಅವರು ಸಾರ್ವಜನಿಕರ ಅಭಿಪ್ರಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ಪ್ರತಿಭಟನಾ ಮೆರವಣಿಗೆ ತೆಲುಗರಬೀದಿ, ಮುಖ್ಯರಸ್ತೆಯ ಮೂಲಕ ಸಾಗಿ ಮೀನುಪೇಟೆಯಿಂದ ತಾಲೂಕು ಕಚೇರಿಯವರೆಗೆ ನಡೆಯಿತು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|
June 9, 2025
11:23 AM
by: ಸಾಯಿಶೇಖರ್ ಕರಿಕಳ
ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ
June 9, 2025
7:27 AM
by: ದ ರೂರಲ್ ಮಿರರ್.ಕಾಂ
ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ
June 9, 2025
6:57 AM
by: ದ ರೂರಲ್ ಮಿರರ್.ಕಾಂ
ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!
June 9, 2025
6:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group