ಸುದ್ದಿಗಳು

ಬೆಟ್ಟ ಕುಸಿಯುವ ಆತಂಕ : ವಿರಾಜಪೇಟೆ ರಸ್ತೆ ವಿಸ್ತರಣೆಗೆ ಆಕ್ಷೇಪ : ಸಾರ್ವಜನಿಕರಿಂದ ಪ್ರತಿಭಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ: ರಸ್ತೆ ವಿಸ್ತರಣೆಯ ನೆಪದಲ್ಲಿ ವಿರಾಜಪೇಟೆ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಕಾಮಗಾರಿಗೆ ಮುಂದಾಗಿದೆ ಎಂದು ಆರೋಪಿಸಿ ವಿವಿಧ ಬಡಾವಣೆಗಳ ಕಟ್ಟಡ ಮಾಲಕರು, ನಿವಾಸಿಗಳು, ವಕೀಲರು ಹಾಗೂ ವರ್ತಕರು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

Advertisement
Advertisement

ಸುಂಕದಕಟ್ಟೆಯಿಂದ ಮೀನುಪೇಟೆಯವರೆಗೆ ರಸ್ತೆ ವಿಸ್ತರಣೆಗೆ ಯೋಜನೆ ರೂಪಿಸಿರುವ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಯೋಜನೆಯ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ತಾಲೂಕು ಕಚೇರಿ ಎದುರು ಆರೋಪಿಸಿದರು.  ಜುಲೈ ತಿಂಗಳಿನಲ್ಲಿ ರಸ್ತೆ ವಿಸ್ತರಣೆ ಸಂಬಂಧ ಸರ್ವೆ ಕಾರ್ಯ ನಡೆಸಿ ಕಟ್ಟಡಗಳ ತೆರವು ಕಾರ್ಯಾಚರಣೆ ಕುರಿತು ಅಧಿಕಾರಿಗಳು ಮುನ್ಸೂಚನೆ ನೀಡಿದ್ದರು. ಆದರೆ ಕಟ್ಟಡ ಮಾಲಕರುಗಳಿಗೆ ಸರಕಾರದ ನಿಯಮದಂತೆ ಪರಿಹಾರ ಒದಗಿಸುವ ಬಗ್ಗೆ ಎಲ್ಲೂ ಪ್ರಸ್ತಾಪಿಸಿಲ್ಲವೆಂದು ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು.

ಸುಮಾರು 200 ವರ್ಷಗಳ ಇತಿಹಾಸ ಹೊಂದಿರುವ ವೀರರಾಜೇಂದ್ರ ಪೇಟೆಯನ್ನು ಅಭಿವೃದ್ಧಿ ಹೆಸರಿನಲ್ಲಿ ಹದಗೆಡಿಸಲಾಗುತ್ತಿದೆ. ಮಲೆತಿರಿಕೆ ಬೆಟ್ಟವನ್ನು ಕೊರೆದು ರಸ್ತೆ ವಿಸ್ತರಣೆ ಮಾಡಿದರೆ ಮಣ್ಣು ಸಡಿಲಗೊಂಡು ಪೂರ್ಣ ಪ್ರಮಾಣದಲ್ಲಿ ಬೆಟ್ಟ ಕುಸಿದು ಪಟ್ಟಣವನ್ನು ಆವರಿಸುವ ಆತಂಕವಿದೆ ಎಂದು ಹಿರಿಯರಾದ ಡಾ.ಐ.ಅರ್.ದುರ್ಗಪ್ರಸಾದ್ ಗಮನ ಸೆಳೆದರು.

ಕಟ್ಟಡ ಮಾಲಕರಿಗೆ ಪರಿಹಾರ ನೀಡಿದ ನಂತರ ರಸ್ತೆ ವಿಸ್ತರಣೆ ಮಾಡಬೇಕೆನ್ನುವ ನಿಯಮವಿದೆ. ಆದರೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಅದೇಶಗಳನ್ನು ಗಾಳಿಗೆ ತೂರಿ ರಸ್ತೆ ವಿಸ್ತರಣೆಗೆ ಮುಂದಾಗಿದ್ದಾರೆ ಎಂದು ವಕೀಲ ರವೀಂದ್ರಕಾಮತ್ ಆರೋಪಿಸಿದರು.  ವಕೀಲ ಟಿ.ಪಿ.ಕೃಷ್ಣ ಅವರು ಮಾತನಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಜವರೇಗೌಡ ಅವರು ಸಾರ್ವಜನಿಕರ ಅಭಿಪ್ರಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ಪ್ರತಿಭಟನಾ ಮೆರವಣಿಗೆ ತೆಲುಗರಬೀದಿ, ಮುಖ್ಯರಸ್ತೆಯ ಮೂಲಕ ಸಾಗಿ ಮೀನುಪೇಟೆಯಿಂದ ತಾಲೂಕು ಕಚೇರಿಯವರೆಗೆ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

6 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

6 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

7 hours ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

15 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

15 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

16 hours ago