Advertisement
ಸುದ್ದಿಗಳು

ಬೆಟ್ಟ ಕುಸಿಯುವ ಆತಂಕ : ವಿರಾಜಪೇಟೆ ರಸ್ತೆ ವಿಸ್ತರಣೆಗೆ ಆಕ್ಷೇಪ : ಸಾರ್ವಜನಿಕರಿಂದ ಪ್ರತಿಭಟನೆ

Share

ಮಡಿಕೇರಿ: ರಸ್ತೆ ವಿಸ್ತರಣೆಯ ನೆಪದಲ್ಲಿ ವಿರಾಜಪೇಟೆ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಕಾಮಗಾರಿಗೆ ಮುಂದಾಗಿದೆ ಎಂದು ಆರೋಪಿಸಿ ವಿವಿಧ ಬಡಾವಣೆಗಳ ಕಟ್ಟಡ ಮಾಲಕರು, ನಿವಾಸಿಗಳು, ವಕೀಲರು ಹಾಗೂ ವರ್ತಕರು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸುಂಕದಕಟ್ಟೆಯಿಂದ ಮೀನುಪೇಟೆಯವರೆಗೆ ರಸ್ತೆ ವಿಸ್ತರಣೆಗೆ ಯೋಜನೆ ರೂಪಿಸಿರುವ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಯೋಜನೆಯ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ತಾಲೂಕು ಕಚೇರಿ ಎದುರು ಆರೋಪಿಸಿದರು.  ಜುಲೈ ತಿಂಗಳಿನಲ್ಲಿ ರಸ್ತೆ ವಿಸ್ತರಣೆ ಸಂಬಂಧ ಸರ್ವೆ ಕಾರ್ಯ ನಡೆಸಿ ಕಟ್ಟಡಗಳ ತೆರವು ಕಾರ್ಯಾಚರಣೆ ಕುರಿತು ಅಧಿಕಾರಿಗಳು ಮುನ್ಸೂಚನೆ ನೀಡಿದ್ದರು. ಆದರೆ ಕಟ್ಟಡ ಮಾಲಕರುಗಳಿಗೆ ಸರಕಾರದ ನಿಯಮದಂತೆ ಪರಿಹಾರ ಒದಗಿಸುವ ಬಗ್ಗೆ ಎಲ್ಲೂ ಪ್ರಸ್ತಾಪಿಸಿಲ್ಲವೆಂದು ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು.

ಸುಮಾರು 200 ವರ್ಷಗಳ ಇತಿಹಾಸ ಹೊಂದಿರುವ ವೀರರಾಜೇಂದ್ರ ಪೇಟೆಯನ್ನು ಅಭಿವೃದ್ಧಿ ಹೆಸರಿನಲ್ಲಿ ಹದಗೆಡಿಸಲಾಗುತ್ತಿದೆ. ಮಲೆತಿರಿಕೆ ಬೆಟ್ಟವನ್ನು ಕೊರೆದು ರಸ್ತೆ ವಿಸ್ತರಣೆ ಮಾಡಿದರೆ ಮಣ್ಣು ಸಡಿಲಗೊಂಡು ಪೂರ್ಣ ಪ್ರಮಾಣದಲ್ಲಿ ಬೆಟ್ಟ ಕುಸಿದು ಪಟ್ಟಣವನ್ನು ಆವರಿಸುವ ಆತಂಕವಿದೆ ಎಂದು ಹಿರಿಯರಾದ ಡಾ.ಐ.ಅರ್.ದುರ್ಗಪ್ರಸಾದ್ ಗಮನ ಸೆಳೆದರು.

ಕಟ್ಟಡ ಮಾಲಕರಿಗೆ ಪರಿಹಾರ ನೀಡಿದ ನಂತರ ರಸ್ತೆ ವಿಸ್ತರಣೆ ಮಾಡಬೇಕೆನ್ನುವ ನಿಯಮವಿದೆ. ಆದರೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಅದೇಶಗಳನ್ನು ಗಾಳಿಗೆ ತೂರಿ ರಸ್ತೆ ವಿಸ್ತರಣೆಗೆ ಮುಂದಾಗಿದ್ದಾರೆ ಎಂದು ವಕೀಲ ರವೀಂದ್ರಕಾಮತ್ ಆರೋಪಿಸಿದರು.  ವಕೀಲ ಟಿ.ಪಿ.ಕೃಷ್ಣ ಅವರು ಮಾತನಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಜವರೇಗೌಡ ಅವರು ಸಾರ್ವಜನಿಕರ ಅಭಿಪ್ರಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ಪ್ರತಿಭಟನಾ ಮೆರವಣಿಗೆ ತೆಲುಗರಬೀದಿ, ಮುಖ್ಯರಸ್ತೆಯ ಮೂಲಕ ಸಾಗಿ ಮೀನುಪೇಟೆಯಿಂದ ತಾಲೂಕು ಕಚೇರಿಯವರೆಗೆ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

39 minutes ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

18 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago