Advertisement
ಸುದ್ದಿಗಳು

ಬೆಟ್ಟ ಕುಸಿಯುವ ಆತಂಕ : ವಿರಾಜಪೇಟೆ ರಸ್ತೆ ವಿಸ್ತರಣೆಗೆ ಆಕ್ಷೇಪ : ಸಾರ್ವಜನಿಕರಿಂದ ಪ್ರತಿಭಟನೆ

Share

ಮಡಿಕೇರಿ: ರಸ್ತೆ ವಿಸ್ತರಣೆಯ ನೆಪದಲ್ಲಿ ವಿರಾಜಪೇಟೆ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಕಾಮಗಾರಿಗೆ ಮುಂದಾಗಿದೆ ಎಂದು ಆರೋಪಿಸಿ ವಿವಿಧ ಬಡಾವಣೆಗಳ ಕಟ್ಟಡ ಮಾಲಕರು, ನಿವಾಸಿಗಳು, ವಕೀಲರು ಹಾಗೂ ವರ್ತಕರು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸುಂಕದಕಟ್ಟೆಯಿಂದ ಮೀನುಪೇಟೆಯವರೆಗೆ ರಸ್ತೆ ವಿಸ್ತರಣೆಗೆ ಯೋಜನೆ ರೂಪಿಸಿರುವ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಯೋಜನೆಯ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ತಾಲೂಕು ಕಚೇರಿ ಎದುರು ಆರೋಪಿಸಿದರು.  ಜುಲೈ ತಿಂಗಳಿನಲ್ಲಿ ರಸ್ತೆ ವಿಸ್ತರಣೆ ಸಂಬಂಧ ಸರ್ವೆ ಕಾರ್ಯ ನಡೆಸಿ ಕಟ್ಟಡಗಳ ತೆರವು ಕಾರ್ಯಾಚರಣೆ ಕುರಿತು ಅಧಿಕಾರಿಗಳು ಮುನ್ಸೂಚನೆ ನೀಡಿದ್ದರು. ಆದರೆ ಕಟ್ಟಡ ಮಾಲಕರುಗಳಿಗೆ ಸರಕಾರದ ನಿಯಮದಂತೆ ಪರಿಹಾರ ಒದಗಿಸುವ ಬಗ್ಗೆ ಎಲ್ಲೂ ಪ್ರಸ್ತಾಪಿಸಿಲ್ಲವೆಂದು ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು.

ಸುಮಾರು 200 ವರ್ಷಗಳ ಇತಿಹಾಸ ಹೊಂದಿರುವ ವೀರರಾಜೇಂದ್ರ ಪೇಟೆಯನ್ನು ಅಭಿವೃದ್ಧಿ ಹೆಸರಿನಲ್ಲಿ ಹದಗೆಡಿಸಲಾಗುತ್ತಿದೆ. ಮಲೆತಿರಿಕೆ ಬೆಟ್ಟವನ್ನು ಕೊರೆದು ರಸ್ತೆ ವಿಸ್ತರಣೆ ಮಾಡಿದರೆ ಮಣ್ಣು ಸಡಿಲಗೊಂಡು ಪೂರ್ಣ ಪ್ರಮಾಣದಲ್ಲಿ ಬೆಟ್ಟ ಕುಸಿದು ಪಟ್ಟಣವನ್ನು ಆವರಿಸುವ ಆತಂಕವಿದೆ ಎಂದು ಹಿರಿಯರಾದ ಡಾ.ಐ.ಅರ್.ದುರ್ಗಪ್ರಸಾದ್ ಗಮನ ಸೆಳೆದರು.

ಕಟ್ಟಡ ಮಾಲಕರಿಗೆ ಪರಿಹಾರ ನೀಡಿದ ನಂತರ ರಸ್ತೆ ವಿಸ್ತರಣೆ ಮಾಡಬೇಕೆನ್ನುವ ನಿಯಮವಿದೆ. ಆದರೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಅದೇಶಗಳನ್ನು ಗಾಳಿಗೆ ತೂರಿ ರಸ್ತೆ ವಿಸ್ತರಣೆಗೆ ಮುಂದಾಗಿದ್ದಾರೆ ಎಂದು ವಕೀಲ ರವೀಂದ್ರಕಾಮತ್ ಆರೋಪಿಸಿದರು.  ವಕೀಲ ಟಿ.ಪಿ.ಕೃಷ್ಣ ಅವರು ಮಾತನಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಜವರೇಗೌಡ ಅವರು ಸಾರ್ವಜನಿಕರ ಅಭಿಪ್ರಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ಪ್ರತಿಭಟನಾ ಮೆರವಣಿಗೆ ತೆಲುಗರಬೀದಿ, ಮುಖ್ಯರಸ್ತೆಯ ಮೂಲಕ ಸಾಗಿ ಮೀನುಪೇಟೆಯಿಂದ ತಾಲೂಕು ಕಚೇರಿಯವರೆಗೆ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

13 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

22 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

23 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago