Advertisement
ಸುದ್ದಿಗಳು

ಬೆಟ್ಟ ಕುಸಿಯುವ ಆತಂಕ : ವಿರಾಜಪೇಟೆ ರಸ್ತೆ ವಿಸ್ತರಣೆಗೆ ಆಕ್ಷೇಪ : ಸಾರ್ವಜನಿಕರಿಂದ ಪ್ರತಿಭಟನೆ

Share

ಮಡಿಕೇರಿ: ರಸ್ತೆ ವಿಸ್ತರಣೆಯ ನೆಪದಲ್ಲಿ ವಿರಾಜಪೇಟೆ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಕಾಮಗಾರಿಗೆ ಮುಂದಾಗಿದೆ ಎಂದು ಆರೋಪಿಸಿ ವಿವಿಧ ಬಡಾವಣೆಗಳ ಕಟ್ಟಡ ಮಾಲಕರು, ನಿವಾಸಿಗಳು, ವಕೀಲರು ಹಾಗೂ ವರ್ತಕರು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸುಂಕದಕಟ್ಟೆಯಿಂದ ಮೀನುಪೇಟೆಯವರೆಗೆ ರಸ್ತೆ ವಿಸ್ತರಣೆಗೆ ಯೋಜನೆ ರೂಪಿಸಿರುವ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಯೋಜನೆಯ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ತಾಲೂಕು ಕಚೇರಿ ಎದುರು ಆರೋಪಿಸಿದರು.  ಜುಲೈ ತಿಂಗಳಿನಲ್ಲಿ ರಸ್ತೆ ವಿಸ್ತರಣೆ ಸಂಬಂಧ ಸರ್ವೆ ಕಾರ್ಯ ನಡೆಸಿ ಕಟ್ಟಡಗಳ ತೆರವು ಕಾರ್ಯಾಚರಣೆ ಕುರಿತು ಅಧಿಕಾರಿಗಳು ಮುನ್ಸೂಚನೆ ನೀಡಿದ್ದರು. ಆದರೆ ಕಟ್ಟಡ ಮಾಲಕರುಗಳಿಗೆ ಸರಕಾರದ ನಿಯಮದಂತೆ ಪರಿಹಾರ ಒದಗಿಸುವ ಬಗ್ಗೆ ಎಲ್ಲೂ ಪ್ರಸ್ತಾಪಿಸಿಲ್ಲವೆಂದು ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು.

ಸುಮಾರು 200 ವರ್ಷಗಳ ಇತಿಹಾಸ ಹೊಂದಿರುವ ವೀರರಾಜೇಂದ್ರ ಪೇಟೆಯನ್ನು ಅಭಿವೃದ್ಧಿ ಹೆಸರಿನಲ್ಲಿ ಹದಗೆಡಿಸಲಾಗುತ್ತಿದೆ. ಮಲೆತಿರಿಕೆ ಬೆಟ್ಟವನ್ನು ಕೊರೆದು ರಸ್ತೆ ವಿಸ್ತರಣೆ ಮಾಡಿದರೆ ಮಣ್ಣು ಸಡಿಲಗೊಂಡು ಪೂರ್ಣ ಪ್ರಮಾಣದಲ್ಲಿ ಬೆಟ್ಟ ಕುಸಿದು ಪಟ್ಟಣವನ್ನು ಆವರಿಸುವ ಆತಂಕವಿದೆ ಎಂದು ಹಿರಿಯರಾದ ಡಾ.ಐ.ಅರ್.ದುರ್ಗಪ್ರಸಾದ್ ಗಮನ ಸೆಳೆದರು.

ಕಟ್ಟಡ ಮಾಲಕರಿಗೆ ಪರಿಹಾರ ನೀಡಿದ ನಂತರ ರಸ್ತೆ ವಿಸ್ತರಣೆ ಮಾಡಬೇಕೆನ್ನುವ ನಿಯಮವಿದೆ. ಆದರೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಅದೇಶಗಳನ್ನು ಗಾಳಿಗೆ ತೂರಿ ರಸ್ತೆ ವಿಸ್ತರಣೆಗೆ ಮುಂದಾಗಿದ್ದಾರೆ ಎಂದು ವಕೀಲ ರವೀಂದ್ರಕಾಮತ್ ಆರೋಪಿಸಿದರು.  ವಕೀಲ ಟಿ.ಪಿ.ಕೃಷ್ಣ ಅವರು ಮಾತನಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಜವರೇಗೌಡ ಅವರು ಸಾರ್ವಜನಿಕರ ಅಭಿಪ್ರಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ಪ್ರತಿಭಟನಾ ಮೆರವಣಿಗೆ ತೆಲುಗರಬೀದಿ, ಮುಖ್ಯರಸ್ತೆಯ ಮೂಲಕ ಸಾಗಿ ಮೀನುಪೇಟೆಯಿಂದ ತಾಲೂಕು ಕಚೇರಿಯವರೆಗೆ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

3 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

12 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

13 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

19 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

20 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

22 hours ago