Advertisement
ಸುದ್ದಿಗಳು

ಬೆಟ್ಟ ಕುಸಿಯುವ ಆತಂಕ : ವಿರಾಜಪೇಟೆ ರಸ್ತೆ ವಿಸ್ತರಣೆಗೆ ಆಕ್ಷೇಪ : ಸಾರ್ವಜನಿಕರಿಂದ ಪ್ರತಿಭಟನೆ

Share

ಮಡಿಕೇರಿ: ರಸ್ತೆ ವಿಸ್ತರಣೆಯ ನೆಪದಲ್ಲಿ ವಿರಾಜಪೇಟೆ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಕಾಮಗಾರಿಗೆ ಮುಂದಾಗಿದೆ ಎಂದು ಆರೋಪಿಸಿ ವಿವಿಧ ಬಡಾವಣೆಗಳ ಕಟ್ಟಡ ಮಾಲಕರು, ನಿವಾಸಿಗಳು, ವಕೀಲರು ಹಾಗೂ ವರ್ತಕರು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸುಂಕದಕಟ್ಟೆಯಿಂದ ಮೀನುಪೇಟೆಯವರೆಗೆ ರಸ್ತೆ ವಿಸ್ತರಣೆಗೆ ಯೋಜನೆ ರೂಪಿಸಿರುವ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಯೋಜನೆಯ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ತಾಲೂಕು ಕಚೇರಿ ಎದುರು ಆರೋಪಿಸಿದರು.  ಜುಲೈ ತಿಂಗಳಿನಲ್ಲಿ ರಸ್ತೆ ವಿಸ್ತರಣೆ ಸಂಬಂಧ ಸರ್ವೆ ಕಾರ್ಯ ನಡೆಸಿ ಕಟ್ಟಡಗಳ ತೆರವು ಕಾರ್ಯಾಚರಣೆ ಕುರಿತು ಅಧಿಕಾರಿಗಳು ಮುನ್ಸೂಚನೆ ನೀಡಿದ್ದರು. ಆದರೆ ಕಟ್ಟಡ ಮಾಲಕರುಗಳಿಗೆ ಸರಕಾರದ ನಿಯಮದಂತೆ ಪರಿಹಾರ ಒದಗಿಸುವ ಬಗ್ಗೆ ಎಲ್ಲೂ ಪ್ರಸ್ತಾಪಿಸಿಲ್ಲವೆಂದು ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು.

ಸುಮಾರು 200 ವರ್ಷಗಳ ಇತಿಹಾಸ ಹೊಂದಿರುವ ವೀರರಾಜೇಂದ್ರ ಪೇಟೆಯನ್ನು ಅಭಿವೃದ್ಧಿ ಹೆಸರಿನಲ್ಲಿ ಹದಗೆಡಿಸಲಾಗುತ್ತಿದೆ. ಮಲೆತಿರಿಕೆ ಬೆಟ್ಟವನ್ನು ಕೊರೆದು ರಸ್ತೆ ವಿಸ್ತರಣೆ ಮಾಡಿದರೆ ಮಣ್ಣು ಸಡಿಲಗೊಂಡು ಪೂರ್ಣ ಪ್ರಮಾಣದಲ್ಲಿ ಬೆಟ್ಟ ಕುಸಿದು ಪಟ್ಟಣವನ್ನು ಆವರಿಸುವ ಆತಂಕವಿದೆ ಎಂದು ಹಿರಿಯರಾದ ಡಾ.ಐ.ಅರ್.ದುರ್ಗಪ್ರಸಾದ್ ಗಮನ ಸೆಳೆದರು.

ಕಟ್ಟಡ ಮಾಲಕರಿಗೆ ಪರಿಹಾರ ನೀಡಿದ ನಂತರ ರಸ್ತೆ ವಿಸ್ತರಣೆ ಮಾಡಬೇಕೆನ್ನುವ ನಿಯಮವಿದೆ. ಆದರೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಅದೇಶಗಳನ್ನು ಗಾಳಿಗೆ ತೂರಿ ರಸ್ತೆ ವಿಸ್ತರಣೆಗೆ ಮುಂದಾಗಿದ್ದಾರೆ ಎಂದು ವಕೀಲ ರವೀಂದ್ರಕಾಮತ್ ಆರೋಪಿಸಿದರು.  ವಕೀಲ ಟಿ.ಪಿ.ಕೃಷ್ಣ ಅವರು ಮಾತನಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಜವರೇಗೌಡ ಅವರು ಸಾರ್ವಜನಿಕರ ಅಭಿಪ್ರಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ಪ್ರತಿಭಟನಾ ಮೆರವಣಿಗೆ ತೆಲುಗರಬೀದಿ, ಮುಖ್ಯರಸ್ತೆಯ ಮೂಲಕ ಸಾಗಿ ಮೀನುಪೇಟೆಯಿಂದ ತಾಲೂಕು ಕಚೇರಿಯವರೆಗೆ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

5 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

9 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

21 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

22 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

22 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

22 hours ago