ಅನುಕ್ರಮ

ಬೆನ್ನತ್ತಿ ಬಂದ ಮಾಯೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಬೆಳಕನು ಕಾಣಲು‌ ಹಂಬಲಿಸಿ
ಕತ್ತಲೆಯ ಜಗದಿಂದ ಹೊರಬಂದೆ
ಬೆನ್ನ ಹಿಂದೆಯೇ ಮತ್ತಾವುದೋ ಕರಿ ಛಾಯೆ
ನನ್ನ ಹಿಂಬಾಲಿಸಲೆಂದೇ ಬಂದಂತಿದೆ
ಎಲ್ಲರೂ ಅಪರಿಚಿತರು ಕಂಡೊಮ್ಮೆ ಬೆರಗಾದೆ
ಅಮ್ಮ , ಅಪ್ಪ‌ ,ಅಜ್ಜ ,ಅಜ್ಜಿ ಎಂದವರು ಪರಿಚಯಿಸಿದರು
ಹೌದು! ಅಪರಿಚಿತರಲ್ಲ ಇವರು ನನ್ನವರು
ಸದಾ ನನ್ನ ಬೆನ್ನತ್ತಿರುವ ಆ ವ್ಯಾಘ್ರ ರೂಪ ಯಾರದು?
ಹೆಜ್ಜೆ ಕಲಿತೆ, ಓಡಲರಿತೆ‌ ಬಿಡಲಿಲ್ಲ‌ ಮಾಯೆ
ಹೋದಲೆಲ್ಲಾ ನನ್ನನ್ನೇ ಕೈ‌ ಬೀಸಿ ಕರೆಯುತಿದೆ
ಭಕ್ತಿಯಿಂದ ಬೇಡಿದೆ, ಕೈಯಲ್ಲಿದ್ದ ಹಣ ಸುರಿದೆ
ಇಲ್ಲ  ಅದು ಹಿಂಬಾಲಿಸಿದುದು ನನ್ನನ್ನೇ!
ಏಕೋ ಹಿಂತಿರುಗಿ ಮಾತನಾಡಬೇಕೆಸಿತು
ಇದು ನಿನ್ನ ಮನೆಯಲ್ಲ‌ ಎಂದು‌ ಮತ್ತೆ ಕರೆಯಿತು
ಇಲ್ಲಿರುವವರು ನನ್ನವರು ನಾ ಬರಲೊಲ್ಲೆ ಎಂದೆ
ಮತ್ತದೇ ದನಿ “ಅಲ್ಲಿದೆ ನಿನ್ನ ಮನೆ”
ಮಾಯೆಯ ಕಣ್ತಪ್ಪಿಸಿ ಓಡಿ ಸೋತು ಹೋದೆ
ನಾನೇ ಮನೆಯ ದಾರಿ ಹುಡುಕಿ ಮಾಯೆಯ ಕರೆದೆ…
ಬರಲಿಲ್ಲ ಅವಳು ಬಲು ಮಾಟಗಾತಿ..
ಅತ್ತು ಕರೆದು ದಾರಿ ತೋರೆಂದೆ ಬಗ್ಗಲಿಲ್ಲ ಅವಳು
ಮತ್ತೋಮ್ಮೆ ಅವಳೇ ಬಂದಳು ನನ್ನದು ಮೊಂಡುತನ
ಬರಲಿಲ್ಲವೆಂದರೂ ಬಿಡಲಿಲ್ಲ ಅವಳು
ಕೈ ಹಿಡಿದು ಆ ಮನೆಯ ದಾರಿ ತೋರಿದಳು
ಮತ್ತೆಂದು ಈ ಮನೆಗೆ ದಾರಿ ಸಿಗದಂತೆ ಮಾಯ ಮಾಡಿದಳು..
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

22 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

22 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

1 day ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

1 day ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

1 day ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

1 day ago