Advertisement
ಕಾರ್ಯಕ್ರಮಗಳು

ಬೆಳಂದೂರು: ಉಚಿತ ನೇತ್ರ ತಪಾಸಣಾ ಶಿಬಿರ

Share

ಬೆಳಂದೂರು: ಕಣ್ಣು ಮಾನವನ ಶರೀರದ ಪ್ರಮುಖ ಅಂಗ, ಕಣ್ಣಿಗೆ ತೊಂದರೆಯಾದರೆ ಜೀವನದ ಬೆಳಕನ್ನು ಕಳೆದು ಕೊಂಡಂತೆ ಆದುದರಿಂದ ಕಣ್ಣಿನ ಆರೋಗ್ಯದ ಕಡೆ ಗಮನ ಹರಿಸುವುದು ಅತಿ ಅಗತ್ಯ. ಇದಕ್ಕೆ ಇಂಥ ಶಿಬಿರಗಳು ಪೂರಕ ವಾತಾವರಣ ಒದಗಿಸುತ್ತದೆ. ಇಂಥ ಕಾರ್ಯಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದು ಬೆಳಂದೂರು ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರದ ಪ್ರಮೀಳಾ ಜನಾರ್ದನ ಹೇಳಿದರು.

ಅವರು ಬೆಳಂದೂರು ಶಾಲೆಯಲ್ಲಿ ಬೆಳಂದೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸಂಭವ್ ಫೌಂಡೇಶನ್ ಐ ಮಿತ್ರ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಡಾ. ಪಿ ದಯಾನಂದ ಪೈ ಮತ್ತು ಟಿ ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಇವರ ಆಶ್ರಯದಲ್ಲಿ ಗೆಳೆಯರ ಬಳಗ ಕೊಡಿಮಾರು ಅಬೀರ, ಸದಾಶಿವ ಯುವಕ ಮಂಡಲ ಅಗಳಿ, ಸುಗ್ರಾಮ ಸಂಘ ಪುತ್ತೂರು ಮತ್ತು ಅಧ್ಯಕ್ಷರು, ಸರ್ವ ಸದಸ್ಯರು ಸಿಬ್ಬಂದಿ ವರ್ಗ ಬೆಳಂದೂರು ಗ್ರಾಮ ಪಂಚಾಯತ್ ಇವರ ಸಹಕಾರದೊಂದಿಗೆ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರಾದ  ಉಮೇಶ್ವರಿ ಅಗಳಿರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಲಿತಾ ಈಶ್ವರ ಮಾನ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರು, ಸವಣೂರು ಕ್ಷೇತ್ರದ ತಾಲೂಕು ಪಂಚಾಯತ್ ಸದಸ್ಯರಾದ ರಾಜೇಶ್ವರಿ, ಪುರಂದರ ಅಗಳಿ ಅಧ್ಯಕ್ಷರು ಸದಾಶಿವ ಯುವಕ ಮಂಡಲ ಅಗಳಿ, ಪ್ರಮೋದ್ ನೀರಜರಿ ಅಧ್ಯಕ್ಷರು ಗೆಳೆಯರ ಬಳಗ ಕೊಡಿಮಾರು ಅಬೀರ, ಜಿನ್ನಪ್ಪ ಗೌಡ ಅಧ್ಯಕ್ಷರು ಎಸ್. ಡಿ.ಎಂ.ಸಿ ಬೆಳಂದೂರು ಶಾಲೆ, ಹರೀಶ್ ಕೆರೆನಾರು ಉಪಾಧ್ಯಕ್ಷರು ಬೆಳಂದೂರು ಗ್ರಾಮ ಪಂಚಾಯತ್, ವೇಣುಗೋಪಾಲ್ ಕಳುವಾಜೆ ಅಧ್ಯಕ್ಷರು ಗ್ರಾಮಾಭಿವೃದ್ಧಿ ಯೋಜನೆ ಬೆಳಂದೂರು ಬಿ ಒಕ್ಕೂಟ ಇವರುಗಳು ಭಾಗವಹಿಸಿದ್ದರು.

ಐ ಮಿತ್ರ ಇದರ ಮೆನೇಜರ್ ಆಗಿರುವ ಹೇಮಚಂದ್ರರವರು ಶಿಬಿರದ ಮತ್ತು ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಬೆಳಂದೂರು ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರಶಾಂತಿ ಪ್ರಾರ್ಥಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಜಯಂತ ಅಬೀರ ಸ್ವಾಗತಿಸಿ ಗೆಳೆಯರ ಬಳಗ ಕೊಡಿಮಾರು ಅಬೀರ ಇದರ ಗೌರವ ಸಲಹೆಗಾರರಾಗಿರುವ ಶೇಷಪ್ಪ ಅಬೀರ ವಂದಿಸಿದರು. ಸದಾಶಿವ ಯುವಕ ಮಂಡಲ ಅಗಳಿ ಇದರ ಉದಯ ಕುಮಾರ್ ಅಗಳಿ ಕಾರ್ಯಕ್ರಮ ನಿರೂಪಿಸಿದರು. ನಂತರ ನಡೆದ ಶಿಬಿರದಲ್ಲಿ ಹಲವಾರು ಜನರ ಕಣ್ಣಿನ ತಪಾಸಣೆ ನಡೆಸಿ ಅಗತ್ಯವುಳ್ಳವರಿಗೆ ಕನ್ನಡಕಗಳನ್ನು ವಿತರಣೆ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

48 minutes ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago