Advertisement
ಕಾರ್ಯಕ್ರಮಗಳು

ಬೆಳಂದೂರು: ಉಚಿತ ನೇತ್ರ ತಪಾಸಣಾ ಶಿಬಿರ

Share

ಬೆಳಂದೂರು: ಕಣ್ಣು ಮಾನವನ ಶರೀರದ ಪ್ರಮುಖ ಅಂಗ, ಕಣ್ಣಿಗೆ ತೊಂದರೆಯಾದರೆ ಜೀವನದ ಬೆಳಕನ್ನು ಕಳೆದು ಕೊಂಡಂತೆ ಆದುದರಿಂದ ಕಣ್ಣಿನ ಆರೋಗ್ಯದ ಕಡೆ ಗಮನ ಹರಿಸುವುದು ಅತಿ ಅಗತ್ಯ. ಇದಕ್ಕೆ ಇಂಥ ಶಿಬಿರಗಳು ಪೂರಕ ವಾತಾವರಣ ಒದಗಿಸುತ್ತದೆ. ಇಂಥ ಕಾರ್ಯಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದು ಬೆಳಂದೂರು ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರದ ಪ್ರಮೀಳಾ ಜನಾರ್ದನ ಹೇಳಿದರು.

ಅವರು ಬೆಳಂದೂರು ಶಾಲೆಯಲ್ಲಿ ಬೆಳಂದೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸಂಭವ್ ಫೌಂಡೇಶನ್ ಐ ಮಿತ್ರ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಡಾ. ಪಿ ದಯಾನಂದ ಪೈ ಮತ್ತು ಟಿ ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಇವರ ಆಶ್ರಯದಲ್ಲಿ ಗೆಳೆಯರ ಬಳಗ ಕೊಡಿಮಾರು ಅಬೀರ, ಸದಾಶಿವ ಯುವಕ ಮಂಡಲ ಅಗಳಿ, ಸುಗ್ರಾಮ ಸಂಘ ಪುತ್ತೂರು ಮತ್ತು ಅಧ್ಯಕ್ಷರು, ಸರ್ವ ಸದಸ್ಯರು ಸಿಬ್ಬಂದಿ ವರ್ಗ ಬೆಳಂದೂರು ಗ್ರಾಮ ಪಂಚಾಯತ್ ಇವರ ಸಹಕಾರದೊಂದಿಗೆ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರಾದ  ಉಮೇಶ್ವರಿ ಅಗಳಿರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಲಿತಾ ಈಶ್ವರ ಮಾನ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರು, ಸವಣೂರು ಕ್ಷೇತ್ರದ ತಾಲೂಕು ಪಂಚಾಯತ್ ಸದಸ್ಯರಾದ ರಾಜೇಶ್ವರಿ, ಪುರಂದರ ಅಗಳಿ ಅಧ್ಯಕ್ಷರು ಸದಾಶಿವ ಯುವಕ ಮಂಡಲ ಅಗಳಿ, ಪ್ರಮೋದ್ ನೀರಜರಿ ಅಧ್ಯಕ್ಷರು ಗೆಳೆಯರ ಬಳಗ ಕೊಡಿಮಾರು ಅಬೀರ, ಜಿನ್ನಪ್ಪ ಗೌಡ ಅಧ್ಯಕ್ಷರು ಎಸ್. ಡಿ.ಎಂ.ಸಿ ಬೆಳಂದೂರು ಶಾಲೆ, ಹರೀಶ್ ಕೆರೆನಾರು ಉಪಾಧ್ಯಕ್ಷರು ಬೆಳಂದೂರು ಗ್ರಾಮ ಪಂಚಾಯತ್, ವೇಣುಗೋಪಾಲ್ ಕಳುವಾಜೆ ಅಧ್ಯಕ್ಷರು ಗ್ರಾಮಾಭಿವೃದ್ಧಿ ಯೋಜನೆ ಬೆಳಂದೂರು ಬಿ ಒಕ್ಕೂಟ ಇವರುಗಳು ಭಾಗವಹಿಸಿದ್ದರು.

ಐ ಮಿತ್ರ ಇದರ ಮೆನೇಜರ್ ಆಗಿರುವ ಹೇಮಚಂದ್ರರವರು ಶಿಬಿರದ ಮತ್ತು ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಬೆಳಂದೂರು ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರಶಾಂತಿ ಪ್ರಾರ್ಥಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಜಯಂತ ಅಬೀರ ಸ್ವಾಗತಿಸಿ ಗೆಳೆಯರ ಬಳಗ ಕೊಡಿಮಾರು ಅಬೀರ ಇದರ ಗೌರವ ಸಲಹೆಗಾರರಾಗಿರುವ ಶೇಷಪ್ಪ ಅಬೀರ ವಂದಿಸಿದರು. ಸದಾಶಿವ ಯುವಕ ಮಂಡಲ ಅಗಳಿ ಇದರ ಉದಯ ಕುಮಾರ್ ಅಗಳಿ ಕಾರ್ಯಕ್ರಮ ನಿರೂಪಿಸಿದರು. ನಂತರ ನಡೆದ ಶಿಬಿರದಲ್ಲಿ ಹಲವಾರು ಜನರ ಕಣ್ಣಿನ ತಪಾಸಣೆ ನಡೆಸಿ ಅಗತ್ಯವುಳ್ಳವರಿಗೆ ಕನ್ನಡಕಗಳನ್ನು ವಿತರಣೆ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

46 minutes ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

8 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

8 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

15 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

17 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago