ಸುದ್ದಿಗಳು

ಬೆಳಂದೂರು : ನೆರೆಹೊರೆ ಯುವ ಸಂಸತ್ತು ಕಾರ್ಯಗಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸವಣೂರು: ಯುವಜನತೆ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸಾಮಾಜಿಕವಾಗಿ ಬೆಳೆಯಲು ಸಾಧ್ಯ.ಯುವ ಜನತೆಯ ಅಭ್ಯುದಯಕ್ಕಾಗಿ ಕೇಂದ್ರ ಸರಕಾರದ ನೆಹರು ಯುವ ಕೇಂದ್ರದ ಮೂಲಕ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ವಿದ್ಯಾವಂತ ಯುವಜನತೆ ಸ್ವಹಿತಾಸಕ್ತಿಗಾಗಿ ಬದುಕು ಸೀಮಿತಗೊಳಿಸದೇ ದೇಶದ ಆಗುಹೋಗುಗಳತ್ತ ಗಮನ ಹರಿಸಬೇಕು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ರಘುವೀರ್ ಬಿ.ಎಸ್ ಹೇಳಿದರು.

Advertisement
Advertisement

ಅವರು ಸೋಮವಾರ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು, ಯುವ ಚೇತನಾ ಸೇವಾ ಸಂಘ ಪುಣ್ಚಪ್ಪಾಡಿ,ರಾಜ್ಯ ಪ್ರಶಸ್ತಿ ಪುರಸ್ಕøತ ಸವಣೂರು ಯುವಕ ಮಂಡಲ ಹಾಗೂ ಬೆಳಂದೂರು ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಹಾಗೂ ಅನುಷ್ಠಾನದಲ್ಲಿ ಸಮುದಾಯ ಸಂಘಟನೆಗಳ ಪಾತ್ರಗಳ ಕುರಿತ ಮಾಹಿತಿ ಕಾರ್ಯಗಾರ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ನಿವೃತ ಅಂಚೆ ಪಾಲಕ ಸೀತಾರಾಮ ಗೌಡ ಮುಂಡಾಳ ಮಾತನಾಡಿ,ಯುವಜನತೆ ಈ ದೇಶದ ಆಸ್ತಿ ಮತ್ತು ಆಧಾರ ಸ್ತಂಭಗಳು. ಅವರು ವಿದ್ಯೆ ಕಲಿತು ಉತ್ತಮ ನಾಗರಿಕರಾದರೆ ರಾಷ್ಟ್ರದ ಭವಿಷ್ಯ ಉಜ್ವಲವಾಗುತ್ತದೆ. ಯುವಜನತೆ ಸಮಾಜದಲ್ಲಿರುವ ಭ್ರಷ್ಟಾಚಾರ, ಅತ್ಯಾಚಾರ, ಅನಾಚಾರದಂತಹ ಪಿಡುಗುಗಳ ನಿವಾರಣೆಗೆ ಮುಂದಾಗಬೇಕು ಎಂದರು.
ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರುಂಬಾರು ಮಾತನಾಡಿ,ಯುವಜನತೆ ಸಂಘ ಸಂಸ್ಥೆಗಳಲ್ಲಿ ತೊಡಗಿಸುವುದರ ಮೂಲಕ ತಮ್ಮ ಬೆಳವಣಿಗೆ ಹೊಂದಲು ಸಾಧ್ಯ ಎಂದರು.
ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ಪದ್ಮನಾಭ ಕೆ ಅಧ್ಯಕ್ಷತೆ ವಹಿಸಿದ್ದರು. ಕೌಶಲಾಭ್ಯವೃದ್ಧಿ ಮತ್ತು ಸೃಜನ ಶೀಲತೆ ಕುರಿತಾಗಿ ಮಂಗಳೂರಿನ ಮುಕುಂದರಾಜ್ ಕಾರ್‍ಸ್ಟ್ರೀಟ್ ಅವರು, ಅಂಚೆ ಇಲಾಖೆ ಕಾರ್ಯ ನಿರ್ವಹಣೆ ಹಾಗೂ ಸುಕನ್ಯಾ ಸಮೃದ್ದಿ ಯೋಜನೆಯ ಕುರಿತು ನಿವೃತ ಅಂಚೆ ಪಾಲಕ ಸೀತಾರಾಮ ಗೌಡ , ಸ್ವಚ್ಚ ಭಾರತ್ ಹಾಗೂ ಯೋಗ ,ವ್ಯಕ್ತಿತ್ವ ವಿಕಸನ ,ನೈತಿಕ ಮೌಲ್ಯ ಕುರಿತಾಗಿ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ತರಬೇತಿ ನೀಡಿದರು.

ಕಾರ್ಯಕ್ರಮ ಸಂಯೋಜಕ ,ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಸ್ವಾಗತಿಸಿದರು.ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು ಪ್ರಸ್ತಾವನೆಗೈದರು.ಕಾರ್ಯದರ್ಶಿ ಪ್ರವೀಣ್ ಚೆನ್ನಾವರ ವಂದಿಸಿದರು. ಮಾಜಿ ಅಧ್ಯಕ್ಷ ದಯಾನಂದ ಮೆದು ಸಹಕರಿಸಿದರು. ಬೆಳಂದೂರು ಕಾಲೇಜಿನ ಉಪನ್ಯಾಸಕ ಸ್ವಾಮಿ ಎಸ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

5 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

9 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

21 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

1 day ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago