Advertisement
ಸುದ್ದಿಗಳು

ಬೆಳಂದೂರು : ನೆರೆಹೊರೆ ಯುವ ಸಂಸತ್ತು ಕಾರ್ಯಗಾರ

Share

ಸವಣೂರು: ಯುವಜನತೆ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸಾಮಾಜಿಕವಾಗಿ ಬೆಳೆಯಲು ಸಾಧ್ಯ.ಯುವ ಜನತೆಯ ಅಭ್ಯುದಯಕ್ಕಾಗಿ ಕೇಂದ್ರ ಸರಕಾರದ ನೆಹರು ಯುವ ಕೇಂದ್ರದ ಮೂಲಕ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ವಿದ್ಯಾವಂತ ಯುವಜನತೆ ಸ್ವಹಿತಾಸಕ್ತಿಗಾಗಿ ಬದುಕು ಸೀಮಿತಗೊಳಿಸದೇ ದೇಶದ ಆಗುಹೋಗುಗಳತ್ತ ಗಮನ ಹರಿಸಬೇಕು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ರಘುವೀರ್ ಬಿ.ಎಸ್ ಹೇಳಿದರು.

ಅವರು ಸೋಮವಾರ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು, ಯುವ ಚೇತನಾ ಸೇವಾ ಸಂಘ ಪುಣ್ಚಪ್ಪಾಡಿ,ರಾಜ್ಯ ಪ್ರಶಸ್ತಿ ಪುರಸ್ಕøತ ಸವಣೂರು ಯುವಕ ಮಂಡಲ ಹಾಗೂ ಬೆಳಂದೂರು ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಹಾಗೂ ಅನುಷ್ಠಾನದಲ್ಲಿ ಸಮುದಾಯ ಸಂಘಟನೆಗಳ ಪಾತ್ರಗಳ ಕುರಿತ ಮಾಹಿತಿ ಕಾರ್ಯಗಾರ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ನಿವೃತ ಅಂಚೆ ಪಾಲಕ ಸೀತಾರಾಮ ಗೌಡ ಮುಂಡಾಳ ಮಾತನಾಡಿ,ಯುವಜನತೆ ಈ ದೇಶದ ಆಸ್ತಿ ಮತ್ತು ಆಧಾರ ಸ್ತಂಭಗಳು. ಅವರು ವಿದ್ಯೆ ಕಲಿತು ಉತ್ತಮ ನಾಗರಿಕರಾದರೆ ರಾಷ್ಟ್ರದ ಭವಿಷ್ಯ ಉಜ್ವಲವಾಗುತ್ತದೆ. ಯುವಜನತೆ ಸಮಾಜದಲ್ಲಿರುವ ಭ್ರಷ್ಟಾಚಾರ, ಅತ್ಯಾಚಾರ, ಅನಾಚಾರದಂತಹ ಪಿಡುಗುಗಳ ನಿವಾರಣೆಗೆ ಮುಂದಾಗಬೇಕು ಎಂದರು.
ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರುಂಬಾರು ಮಾತನಾಡಿ,ಯುವಜನತೆ ಸಂಘ ಸಂಸ್ಥೆಗಳಲ್ಲಿ ತೊಡಗಿಸುವುದರ ಮೂಲಕ ತಮ್ಮ ಬೆಳವಣಿಗೆ ಹೊಂದಲು ಸಾಧ್ಯ ಎಂದರು.
ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ಪದ್ಮನಾಭ ಕೆ ಅಧ್ಯಕ್ಷತೆ ವಹಿಸಿದ್ದರು. ಕೌಶಲಾಭ್ಯವೃದ್ಧಿ ಮತ್ತು ಸೃಜನ ಶೀಲತೆ ಕುರಿತಾಗಿ ಮಂಗಳೂರಿನ ಮುಕುಂದರಾಜ್ ಕಾರ್‍ಸ್ಟ್ರೀಟ್ ಅವರು, ಅಂಚೆ ಇಲಾಖೆ ಕಾರ್ಯ ನಿರ್ವಹಣೆ ಹಾಗೂ ಸುಕನ್ಯಾ ಸಮೃದ್ದಿ ಯೋಜನೆಯ ಕುರಿತು ನಿವೃತ ಅಂಚೆ ಪಾಲಕ ಸೀತಾರಾಮ ಗೌಡ , ಸ್ವಚ್ಚ ಭಾರತ್ ಹಾಗೂ ಯೋಗ ,ವ್ಯಕ್ತಿತ್ವ ವಿಕಸನ ,ನೈತಿಕ ಮೌಲ್ಯ ಕುರಿತಾಗಿ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ತರಬೇತಿ ನೀಡಿದರು.

ಕಾರ್ಯಕ್ರಮ ಸಂಯೋಜಕ ,ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಸ್ವಾಗತಿಸಿದರು.ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು ಪ್ರಸ್ತಾವನೆಗೈದರು.ಕಾರ್ಯದರ್ಶಿ ಪ್ರವೀಣ್ ಚೆನ್ನಾವರ ವಂದಿಸಿದರು. ಮಾಜಿ ಅಧ್ಯಕ್ಷ ದಯಾನಂದ ಮೆದು ಸಹಕರಿಸಿದರು. ಬೆಳಂದೂರು ಕಾಲೇಜಿನ ಉಪನ್ಯಾಸಕ ಸ್ವಾಮಿ ಎಸ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 hour ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

11 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

16 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

16 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

16 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

16 hours ago