ಕಡಬ: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2019-20 ನೇ ಸಾಲಿನ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪದವಿ ಸ್ವಯಂಸೇವಕ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು.
ಪುತ್ತೂರು ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ರಾಮಚಂದ್ರ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿ ಸ್ವಯಂಸೇವಕರಾಗಿ ಸಮಾಜ ಸೇವೆ ಮಾಡಲು ರಾಷ್ಟ್ರೀಯ ಸೇವಾ ಯೋಜನೆ ಪೂರಕವಾಗಿದೆ. ವಿದ್ಯಾರ್ಥಿ ದಿಸೆಯಿಂದಲೇ ಸಮಾಜಿಕ ಕಳಕಳಿಗೆ ಮಹತ್ವ ನೀಡಿದಾಗ ಭವಿಷ್ಯದಲ್ಲಿ ಉತ್ತಮ ನಾಗರಿಕನಾಗಲು ಸಾಧ್ಯ. ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊ¼ಂಡು ವಿದ್ಯಾಭ್ಯಾಸ ದೊಂದಿಗೆ ವ್ಯಕ್ತಿತ್ವವನ್ನು ಶ್ರೀಮಂತಗೊಳಿಸಿಕೊಳ್ಳಬೇಕು ಎಂದರು.
ರಾ.ಸೇ.ಯೋಜನಾ ಸಂಯೋಜನಾಧಿಕಾರಿ ಸ್ವಾಮಿ.ಎಸ್.ಬೈಲಕುಪ್ಪ ರಾ.ಸೇ.ಯೋಜನೆಯ ವಾರ್ಷಿಕ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಚಾರ್ಯ ಪ್ರೊ .ಪದ್ಮನಾಭ.ಕೆ ಅದ್ಯಕ್ಷತೆ ವಹಿಸಿದ್ದರು. ರಾ.ಸೇ.ಯೋ.ಘಟಕದ ನಾಯಕ ಪ್ರೇಮನಾಥ ಸ್ವಾಗತಿಸಿದರು. ನಾಯಕಿ ಧನ್ಯಶ್ರೀ ವಂದಿಸಿದರು. ವಿದ್ಯಾರ್ಥಿನಿ ಮಹಾದೇವಿ ನಿರೂಪಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…