Advertisement
ಸುದ್ದಿಗಳು

ಬೆಳಗಾವಿ ಯುವಜನೋತ್ಸವ: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಬಹುಮಾನ

Share

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಯುವಜನೋತ್ಸವ ಇನ್‍ಸಿಗ್ನಿಯ-2019ರಲ್ಲಿ ಒಂದು ಚಿನ್ನ ಹಾಗೂ ಒಂದು ಕಂಚಿನ ಪದಕವನ್ನು ಪಡೆದು ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ.

ಧಾರವಾಡದ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಸಾಂಸ್ಕೃತಿಕ ಮೇಳದಲ್ಲಿ ಭರತನಾಟ್ಯ ವೈಯಕ್ತಿಕ ವಿಭಾಗದಲ್ಲಿ ಕಾಲೇಜಿನ ಎಂಬಿಎ ವಿಭಾಗದ ವಿದ್ಯಾರ್ಥಿನಿ ಶಮಾ ಪ್ರಣಮ್ಯ ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಜಾನಪದ/ಬುಡಕಟ್ಟು ಸಮೂಹ ನೃತ್ಯ ಸ್ಪರ್ಧೆಯಲ್ಲಿ ಮಿಟ್ಸು ಜಾಸ್ಮಿನ್ ಅಂದ್ರಾದೆ, ಅಪೂರ್ವ.ಪಿ, ಶ್ರೀಪಂಚಮಿ.ಎನ್, ಶ್ರದ್ದಾ.ಬಿ.ಡಿ, ಧರಿತ್ರಿ, ವಿಶ್ವಾಸ್.ಎಂ.ಎಸ್, ವಿನೀತ್.ಜೆ.ವಿ, ಹಿತೇಶ್.ಪಿ, ಭಾಗ್ಯರಾಜ್.ಬಿ.ಕೆ ಮತ್ತು ಯು.ಅಭಿಷೇಕ್ ನಾಯಕ್ ಇವರ ತಂಡವು ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಕಾಲೇಜಿನ ಸಾಂಸ್ಕೃತಿಕ ವೇದಿಕೆ ಭೂಮಿಕಾ ಕಲಾ ಸಂಘದ ನಿರ್ದೇಶಕ ಪ್ರೊ.ಸುದರ್ಶನ್.ಎಂ.ಎಲ್ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಲತಾ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಬಾಗವಹಿಸಿದ್ದರು.

ರಾಜ್ಯಾದ್ಯಂತ ಒಟ್ಟು 90 ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಇದರಲ್ಲಿ ಪಾಲ್ಗೊಂಡಿದ್ದವು ಎಂದು ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

7 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

15 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

17 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

22 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

24 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago