ಸುದ್ದಿಗಳು

ಬೆಳೆಗಾರರು ಮತ್ತು ರೈತರಿಗೆ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ : ಸಚಿವ ವಿ.ಸೋಮಣ್ಣ ಸೂಚನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ: ಹತ್ತು ಹೆಚ್.ಪಿ. ಒಳಗಿನ ಪಂಪ್‍ಸೆಟ್‍ಗಳ ಮೂಲಕ ವಿದ್ಯುತ್ ಬಳಸುವ ಕೊಡಗಿನ ಬೆಳೆಗಾರರು ಹಾಗೂ ರೈತರಿಗೆ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.
ಅಧಿಕಾರಿಗಳ ಸಭೆಗೂ ಮೊದಲು ಸಾರ್ವಜನಿಕರ ಅಹವಾಲು ಸ್ವೀಕರಿಸುವ ಸಂದರ್ಭ ರೈತ ಸಮುದಾಯ ಬಳಗ ಮತ್ತು ಕಾಫಿ ಕೃಷಿ ಉತ್ಪಾದಕರ ಕೂಟವು ಸಚಿವರಿಗೆ ಮನವಿ ಸಲ್ಲಿಸಿ, ಇತರ ಜಿಲ್ಲೆಗಳಂತೆ ಕೊಡಗು ಜಿಲ್ಲೆಯಲ್ಲಿಯೂ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡುವಂತೆ ಮನವಿ ಮಾಡಿದರು.

Advertisement
Advertisement

ಮನವಿಗೆ ಪೂರಕವಾಗಿ ಮಾತನಾಡಿದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಕೊಡಗಿನ ಜನ ಶೇ.100 ರಷ್ಟು ವಿದ್ಯುತ್ ಶುಲ್ಕ ಪಾವತಿಸುತ್ತಿದ್ದು, ಪ್ರವಾಹದಿಂದಾಗಿ ಜಿಲ್ಲೆ ಸಂಕಷ್ಟದಲ್ಲಿರುವುದರಿಂದ ಶುಲ್ಕ ವಿನಾಯಿತಿ ನೀಡುವಂತೆ ಮನವಿ ಮಾಡಿದರು.  ಇದಕ್ಕೆ ಸ್ಪಂದಿಸಿದ ಸಚಿವ ವಿ.ಸೋಮಣ್ಣ, ಯಾವುದೇ ಕಾರಣಕ್ಕೂ 10 ಹೆಚ್.ಪಿ. ಒ¼ಗಿನ ಮೋಟಾರ್‍ಗಳಿಗೆ ವಿದ್ಯುತ್ ಶುಲ್ಕ ಸಂಗ್ರಹಿಸಬಾರದು ಮತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬಾರದೆಂದು ಸೂಚನೆ ನೀಡಿದರು.

ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯ ಬೆಳೆಗಾರರು ಹಾಗೂ ರೈತರು ನೋವನ್ನು ಅನುಭವಿಸುತ್ತಿದ್ದು, ವಿದ್ಯುತ್ ಶುಲ್ಕ ಪಾವತಿಸುವಂತೆ ಒತ್ತಡ ಹೇರುವುದು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಸರಿಯಲ್ಲವೆಂದು ಸಚಿವ ಸೋಮಣ್ಣ ಅಧಿಕಾರಿಗಳಿಗೆ ತಿಳಿಸಿದರು. ಮಾಜಿ ಯೋಧರೊಬ್ಬರ ಜಾಗಕ್ಕೆ ಆರ್ ಟಿ ಸಿ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಮಂಗಳವಾರ ಸಂಜೆಯ ಒಳಗಾಗಿ ಖಾತೆ ಮಾಡಿಕೊಡುವಂತೆ ಸೂಚನೆ ನೀಡಿದರು. ಎಡಿಎಲ್‍ಆರ್ ಬಳಿ ವಿಲೇವಾರಿಯಾಗದೆ ಉಳಿದಿರುವ ಎಲ್ಲಾ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಬೇಕು, ಈ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕೆಂದರು.
ಎಂ.ಬಿ.ದೇವಯ್ಯ ಅವರ ನೇತೃತ್ವದ ಸಂತ್ರಸ್ತರ ಹೋರಾಟ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿ, ಸಂತ್ರಸ್ತರಿಗೆ ಇಲ್ಲಿಯವರೆಗೆ ನೂತನ ಮನೆಗಳು ಹಸ್ತಾಂತರವಾಗದೆ ಇರುವ ಬಗ್ಗೆ ಸಚಿವರ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಸಚಿವರು, ಶೀಘ್ರ ಮನೆಗಳನ್ನು ಹಸ್ತಾಂತರಿಸುವ ವಿಶ್ವಾಸ ವ್ಯಕ್ತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

3 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

3 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

4 hours ago

ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ…

4 hours ago

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !

ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…

4 hours ago

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago