ಮಡಿಕೇರಿ: ಹತ್ತು ಹೆಚ್.ಪಿ. ಒಳಗಿನ ಪಂಪ್ಸೆಟ್ಗಳ ಮೂಲಕ ವಿದ್ಯುತ್ ಬಳಸುವ ಕೊಡಗಿನ ಬೆಳೆಗಾರರು ಹಾಗೂ ರೈತರಿಗೆ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.
ಅಧಿಕಾರಿಗಳ ಸಭೆಗೂ ಮೊದಲು ಸಾರ್ವಜನಿಕರ ಅಹವಾಲು ಸ್ವೀಕರಿಸುವ ಸಂದರ್ಭ ರೈತ ಸಮುದಾಯ ಬಳಗ ಮತ್ತು ಕಾಫಿ ಕೃಷಿ ಉತ್ಪಾದಕರ ಕೂಟವು ಸಚಿವರಿಗೆ ಮನವಿ ಸಲ್ಲಿಸಿ, ಇತರ ಜಿಲ್ಲೆಗಳಂತೆ ಕೊಡಗು ಜಿಲ್ಲೆಯಲ್ಲಿಯೂ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡುವಂತೆ ಮನವಿ ಮಾಡಿದರು.
ಮನವಿಗೆ ಪೂರಕವಾಗಿ ಮಾತನಾಡಿದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಕೊಡಗಿನ ಜನ ಶೇ.100 ರಷ್ಟು ವಿದ್ಯುತ್ ಶುಲ್ಕ ಪಾವತಿಸುತ್ತಿದ್ದು, ಪ್ರವಾಹದಿಂದಾಗಿ ಜಿಲ್ಲೆ ಸಂಕಷ್ಟದಲ್ಲಿರುವುದರಿಂದ ಶುಲ್ಕ ವಿನಾಯಿತಿ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವ ವಿ.ಸೋಮಣ್ಣ, ಯಾವುದೇ ಕಾರಣಕ್ಕೂ 10 ಹೆಚ್.ಪಿ. ಒ¼ಗಿನ ಮೋಟಾರ್ಗಳಿಗೆ ವಿದ್ಯುತ್ ಶುಲ್ಕ ಸಂಗ್ರಹಿಸಬಾರದು ಮತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬಾರದೆಂದು ಸೂಚನೆ ನೀಡಿದರು.
ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯ ಬೆಳೆಗಾರರು ಹಾಗೂ ರೈತರು ನೋವನ್ನು ಅನುಭವಿಸುತ್ತಿದ್ದು, ವಿದ್ಯುತ್ ಶುಲ್ಕ ಪಾವತಿಸುವಂತೆ ಒತ್ತಡ ಹೇರುವುದು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಸರಿಯಲ್ಲವೆಂದು ಸಚಿವ ಸೋಮಣ್ಣ ಅಧಿಕಾರಿಗಳಿಗೆ ತಿಳಿಸಿದರು. ಮಾಜಿ ಯೋಧರೊಬ್ಬರ ಜಾಗಕ್ಕೆ ಆರ್ ಟಿ ಸಿ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಮಂಗಳವಾರ ಸಂಜೆಯ ಒಳಗಾಗಿ ಖಾತೆ ಮಾಡಿಕೊಡುವಂತೆ ಸೂಚನೆ ನೀಡಿದರು. ಎಡಿಎಲ್ಆರ್ ಬಳಿ ವಿಲೇವಾರಿಯಾಗದೆ ಉಳಿದಿರುವ ಎಲ್ಲಾ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಬೇಕು, ಈ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕೆಂದರು.
ಎಂ.ಬಿ.ದೇವಯ್ಯ ಅವರ ನೇತೃತ್ವದ ಸಂತ್ರಸ್ತರ ಹೋರಾಟ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿ, ಸಂತ್ರಸ್ತರಿಗೆ ಇಲ್ಲಿಯವರೆಗೆ ನೂತನ ಮನೆಗಳು ಹಸ್ತಾಂತರವಾಗದೆ ಇರುವ ಬಗ್ಗೆ ಸಚಿವರ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಸಚಿವರು, ಶೀಘ್ರ ಮನೆಗಳನ್ನು ಹಸ್ತಾಂತರಿಸುವ ವಿಶ್ವಾಸ ವ್ಯಕ್ತಪಡಿಸಿದರು.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…