Advertisement
ಸುದ್ದಿಗಳು

ಬೆಳೆಗಾರರು ಮತ್ತು ರೈತರಿಗೆ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ : ಸಚಿವ ವಿ.ಸೋಮಣ್ಣ ಸೂಚನೆ

Share

ಮಡಿಕೇರಿ: ಹತ್ತು ಹೆಚ್.ಪಿ. ಒಳಗಿನ ಪಂಪ್‍ಸೆಟ್‍ಗಳ ಮೂಲಕ ವಿದ್ಯುತ್ ಬಳಸುವ ಕೊಡಗಿನ ಬೆಳೆಗಾರರು ಹಾಗೂ ರೈತರಿಗೆ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.
ಅಧಿಕಾರಿಗಳ ಸಭೆಗೂ ಮೊದಲು ಸಾರ್ವಜನಿಕರ ಅಹವಾಲು ಸ್ವೀಕರಿಸುವ ಸಂದರ್ಭ ರೈತ ಸಮುದಾಯ ಬಳಗ ಮತ್ತು ಕಾಫಿ ಕೃಷಿ ಉತ್ಪಾದಕರ ಕೂಟವು ಸಚಿವರಿಗೆ ಮನವಿ ಸಲ್ಲಿಸಿ, ಇತರ ಜಿಲ್ಲೆಗಳಂತೆ ಕೊಡಗು ಜಿಲ್ಲೆಯಲ್ಲಿಯೂ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡುವಂತೆ ಮನವಿ ಮಾಡಿದರು.

Advertisement

ಮನವಿಗೆ ಪೂರಕವಾಗಿ ಮಾತನಾಡಿದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಕೊಡಗಿನ ಜನ ಶೇ.100 ರಷ್ಟು ವಿದ್ಯುತ್ ಶುಲ್ಕ ಪಾವತಿಸುತ್ತಿದ್ದು, ಪ್ರವಾಹದಿಂದಾಗಿ ಜಿಲ್ಲೆ ಸಂಕಷ್ಟದಲ್ಲಿರುವುದರಿಂದ ಶುಲ್ಕ ವಿನಾಯಿತಿ ನೀಡುವಂತೆ ಮನವಿ ಮಾಡಿದರು.  ಇದಕ್ಕೆ ಸ್ಪಂದಿಸಿದ ಸಚಿವ ವಿ.ಸೋಮಣ್ಣ, ಯಾವುದೇ ಕಾರಣಕ್ಕೂ 10 ಹೆಚ್.ಪಿ. ಒ¼ಗಿನ ಮೋಟಾರ್‍ಗಳಿಗೆ ವಿದ್ಯುತ್ ಶುಲ್ಕ ಸಂಗ್ರಹಿಸಬಾರದು ಮತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬಾರದೆಂದು ಸೂಚನೆ ನೀಡಿದರು.

ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯ ಬೆಳೆಗಾರರು ಹಾಗೂ ರೈತರು ನೋವನ್ನು ಅನುಭವಿಸುತ್ತಿದ್ದು, ವಿದ್ಯುತ್ ಶುಲ್ಕ ಪಾವತಿಸುವಂತೆ ಒತ್ತಡ ಹೇರುವುದು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಸರಿಯಲ್ಲವೆಂದು ಸಚಿವ ಸೋಮಣ್ಣ ಅಧಿಕಾರಿಗಳಿಗೆ ತಿಳಿಸಿದರು. ಮಾಜಿ ಯೋಧರೊಬ್ಬರ ಜಾಗಕ್ಕೆ ಆರ್ ಟಿ ಸಿ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಮಂಗಳವಾರ ಸಂಜೆಯ ಒಳಗಾಗಿ ಖಾತೆ ಮಾಡಿಕೊಡುವಂತೆ ಸೂಚನೆ ನೀಡಿದರು. ಎಡಿಎಲ್‍ಆರ್ ಬಳಿ ವಿಲೇವಾರಿಯಾಗದೆ ಉಳಿದಿರುವ ಎಲ್ಲಾ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಬೇಕು, ಈ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕೆಂದರು.
ಎಂ.ಬಿ.ದೇವಯ್ಯ ಅವರ ನೇತೃತ್ವದ ಸಂತ್ರಸ್ತರ ಹೋರಾಟ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿ, ಸಂತ್ರಸ್ತರಿಗೆ ಇಲ್ಲಿಯವರೆಗೆ ನೂತನ ಮನೆಗಳು ಹಸ್ತಾಂತರವಾಗದೆ ಇರುವ ಬಗ್ಗೆ ಸಚಿವರ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಸಚಿವರು, ಶೀಘ್ರ ಮನೆಗಳನ್ನು ಹಸ್ತಾಂತರಿಸುವ ವಿಶ್ವಾಸ ವ್ಯಕ್ತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

9 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago