Advertisement
ಸುದ್ದಿಗಳು

ಬೆಳೆಗಾರರು ಮತ್ತು ರೈತರಿಗೆ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ : ಸಚಿವ ವಿ.ಸೋಮಣ್ಣ ಸೂಚನೆ

Share

ಮಡಿಕೇರಿ: ಹತ್ತು ಹೆಚ್.ಪಿ. ಒಳಗಿನ ಪಂಪ್‍ಸೆಟ್‍ಗಳ ಮೂಲಕ ವಿದ್ಯುತ್ ಬಳಸುವ ಕೊಡಗಿನ ಬೆಳೆಗಾರರು ಹಾಗೂ ರೈತರಿಗೆ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.
ಅಧಿಕಾರಿಗಳ ಸಭೆಗೂ ಮೊದಲು ಸಾರ್ವಜನಿಕರ ಅಹವಾಲು ಸ್ವೀಕರಿಸುವ ಸಂದರ್ಭ ರೈತ ಸಮುದಾಯ ಬಳಗ ಮತ್ತು ಕಾಫಿ ಕೃಷಿ ಉತ್ಪಾದಕರ ಕೂಟವು ಸಚಿವರಿಗೆ ಮನವಿ ಸಲ್ಲಿಸಿ, ಇತರ ಜಿಲ್ಲೆಗಳಂತೆ ಕೊಡಗು ಜಿಲ್ಲೆಯಲ್ಲಿಯೂ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡುವಂತೆ ಮನವಿ ಮಾಡಿದರು.

ಮನವಿಗೆ ಪೂರಕವಾಗಿ ಮಾತನಾಡಿದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಕೊಡಗಿನ ಜನ ಶೇ.100 ರಷ್ಟು ವಿದ್ಯುತ್ ಶುಲ್ಕ ಪಾವತಿಸುತ್ತಿದ್ದು, ಪ್ರವಾಹದಿಂದಾಗಿ ಜಿಲ್ಲೆ ಸಂಕಷ್ಟದಲ್ಲಿರುವುದರಿಂದ ಶುಲ್ಕ ವಿನಾಯಿತಿ ನೀಡುವಂತೆ ಮನವಿ ಮಾಡಿದರು.  ಇದಕ್ಕೆ ಸ್ಪಂದಿಸಿದ ಸಚಿವ ವಿ.ಸೋಮಣ್ಣ, ಯಾವುದೇ ಕಾರಣಕ್ಕೂ 10 ಹೆಚ್.ಪಿ. ಒ¼ಗಿನ ಮೋಟಾರ್‍ಗಳಿಗೆ ವಿದ್ಯುತ್ ಶುಲ್ಕ ಸಂಗ್ರಹಿಸಬಾರದು ಮತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬಾರದೆಂದು ಸೂಚನೆ ನೀಡಿದರು.

ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯ ಬೆಳೆಗಾರರು ಹಾಗೂ ರೈತರು ನೋವನ್ನು ಅನುಭವಿಸುತ್ತಿದ್ದು, ವಿದ್ಯುತ್ ಶುಲ್ಕ ಪಾವತಿಸುವಂತೆ ಒತ್ತಡ ಹೇರುವುದು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಸರಿಯಲ್ಲವೆಂದು ಸಚಿವ ಸೋಮಣ್ಣ ಅಧಿಕಾರಿಗಳಿಗೆ ತಿಳಿಸಿದರು. ಮಾಜಿ ಯೋಧರೊಬ್ಬರ ಜಾಗಕ್ಕೆ ಆರ್ ಟಿ ಸಿ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಮಂಗಳವಾರ ಸಂಜೆಯ ಒಳಗಾಗಿ ಖಾತೆ ಮಾಡಿಕೊಡುವಂತೆ ಸೂಚನೆ ನೀಡಿದರು. ಎಡಿಎಲ್‍ಆರ್ ಬಳಿ ವಿಲೇವಾರಿಯಾಗದೆ ಉಳಿದಿರುವ ಎಲ್ಲಾ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಬೇಕು, ಈ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕೆಂದರು.
ಎಂ.ಬಿ.ದೇವಯ್ಯ ಅವರ ನೇತೃತ್ವದ ಸಂತ್ರಸ್ತರ ಹೋರಾಟ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿ, ಸಂತ್ರಸ್ತರಿಗೆ ಇಲ್ಲಿಯವರೆಗೆ ನೂತನ ಮನೆಗಳು ಹಸ್ತಾಂತರವಾಗದೆ ಇರುವ ಬಗ್ಗೆ ಸಚಿವರ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಸಚಿವರು, ಶೀಘ್ರ ಮನೆಗಳನ್ನು ಹಸ್ತಾಂತರಿಸುವ ವಿಶ್ವಾಸ ವ್ಯಕ್ತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

36 minutes ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

4 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

6 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

9 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

14 hours ago