ಮಡಿಕೇರಿ: ಹತ್ತು ಹೆಚ್.ಪಿ. ಒಳಗಿನ ಪಂಪ್ಸೆಟ್ಗಳ ಮೂಲಕ ವಿದ್ಯುತ್ ಬಳಸುವ ಕೊಡಗಿನ ಬೆಳೆಗಾರರು ಹಾಗೂ ರೈತರಿಗೆ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.
ಅಧಿಕಾರಿಗಳ ಸಭೆಗೂ ಮೊದಲು ಸಾರ್ವಜನಿಕರ ಅಹವಾಲು ಸ್ವೀಕರಿಸುವ ಸಂದರ್ಭ ರೈತ ಸಮುದಾಯ ಬಳಗ ಮತ್ತು ಕಾಫಿ ಕೃಷಿ ಉತ್ಪಾದಕರ ಕೂಟವು ಸಚಿವರಿಗೆ ಮನವಿ ಸಲ್ಲಿಸಿ, ಇತರ ಜಿಲ್ಲೆಗಳಂತೆ ಕೊಡಗು ಜಿಲ್ಲೆಯಲ್ಲಿಯೂ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡುವಂತೆ ಮನವಿ ಮಾಡಿದರು.
ಮನವಿಗೆ ಪೂರಕವಾಗಿ ಮಾತನಾಡಿದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಕೊಡಗಿನ ಜನ ಶೇ.100 ರಷ್ಟು ವಿದ್ಯುತ್ ಶುಲ್ಕ ಪಾವತಿಸುತ್ತಿದ್ದು, ಪ್ರವಾಹದಿಂದಾಗಿ ಜಿಲ್ಲೆ ಸಂಕಷ್ಟದಲ್ಲಿರುವುದರಿಂದ ಶುಲ್ಕ ವಿನಾಯಿತಿ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವ ವಿ.ಸೋಮಣ್ಣ, ಯಾವುದೇ ಕಾರಣಕ್ಕೂ 10 ಹೆಚ್.ಪಿ. ಒ¼ಗಿನ ಮೋಟಾರ್ಗಳಿಗೆ ವಿದ್ಯುತ್ ಶುಲ್ಕ ಸಂಗ್ರಹಿಸಬಾರದು ಮತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬಾರದೆಂದು ಸೂಚನೆ ನೀಡಿದರು.
ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯ ಬೆಳೆಗಾರರು ಹಾಗೂ ರೈತರು ನೋವನ್ನು ಅನುಭವಿಸುತ್ತಿದ್ದು, ವಿದ್ಯುತ್ ಶುಲ್ಕ ಪಾವತಿಸುವಂತೆ ಒತ್ತಡ ಹೇರುವುದು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಸರಿಯಲ್ಲವೆಂದು ಸಚಿವ ಸೋಮಣ್ಣ ಅಧಿಕಾರಿಗಳಿಗೆ ತಿಳಿಸಿದರು. ಮಾಜಿ ಯೋಧರೊಬ್ಬರ ಜಾಗಕ್ಕೆ ಆರ್ ಟಿ ಸಿ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಮಂಗಳವಾರ ಸಂಜೆಯ ಒಳಗಾಗಿ ಖಾತೆ ಮಾಡಿಕೊಡುವಂತೆ ಸೂಚನೆ ನೀಡಿದರು. ಎಡಿಎಲ್ಆರ್ ಬಳಿ ವಿಲೇವಾರಿಯಾಗದೆ ಉಳಿದಿರುವ ಎಲ್ಲಾ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಬೇಕು, ಈ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕೆಂದರು.
ಎಂ.ಬಿ.ದೇವಯ್ಯ ಅವರ ನೇತೃತ್ವದ ಸಂತ್ರಸ್ತರ ಹೋರಾಟ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿ, ಸಂತ್ರಸ್ತರಿಗೆ ಇಲ್ಲಿಯವರೆಗೆ ನೂತನ ಮನೆಗಳು ಹಸ್ತಾಂತರವಾಗದೆ ಇರುವ ಬಗ್ಗೆ ಸಚಿವರ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಸಚಿವರು, ಶೀಘ್ರ ಮನೆಗಳನ್ನು ಹಸ್ತಾಂತರಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…