Advertisement
ಸುದ್ದಿಗಳು

ಬೆಳೆವಿಮೆ, ಸಾಲಮನ್ನಾ ಯೋಜನೆ ಜಾರಿಯಲ್ಲಿ ಅವ್ಯವಹಾರದ ಸಂಶಯ

Share

ಸುಬ್ರಹ್ಮಣ್ಯ : ಸರಕಾರದ ಸಾಲಮನ್ನಾ ವಂಚಿತರ ಪರ ಹೋರಾಟ ನಡೆಸಲು ಮಲೆನಾಡು ಜನಹಿತ ರಕ್ಷಣಾ ನೇತೃತ್ವದಲ್ಲಿ ರೈತರು, ಜನಪ್ರತಿನಿಧಿಗಳು ಹಾಗೂ ಸಹಕಾರಿ ಸಂಸ್ಥೆಗಳ ಪ್ರಮುಖರನ್ನೊಳಗೊಂಡ ರೂಪುರೇಷೆ ಸಭೆ ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಪಂಚಾಯತ್ ಸಭಾಭವನದಲ್ಲಿ ಜರಗಿತು. ಸಭೆಯಲ್ಲಿ ಕೃಷಿಕರಿಗೆ ಫಸಲ್ ಭೀಮಾ ಯೋಜನೆ (ಬೆಳೆವಿಮೆ) ಮತ್ತು ಸಾಲಮನ್ನಾ ನೀಡುವ ಯೋಜನೆಯಲ್ಲಾಗಿರುವ ತೊಡಕುಗಳಲ್ಲಿ ಭ್ರಷ್ಚಾಚಾರ ಸಂಶಯದ ಬಗ್ಗೆ ಕೃಷಿಕರು, ಮುಖಂಡರಿಂದ ಅಭಿಪ್ರಾಯ ವ್ಯಕ್ತಗೊಂಡಿತು.

ಅ.3ರಂದು ಜಿಲ್ಲಾ ಕೇಂದ್ರ ಮಂಗಳೂರಿನಲ್ಲಿ ಸಾಲಮನ್ನಾ ಬಗ್ಗೆ ನಡೆಯಲಿರುವ ಸಹಕಾರಿ ಸಂಸ್ಥೆಗಳು ಮತ್ತು ಅಧಿಕಾರಿಗಳ ವಿಶೇಷ ಸಭೆಯ ಜರಗಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ 15 ದಿನಗಳಲ್ಲಿ ಸಾಲಮನ್ನಾ ಪಾವತಿ ವ್ಯವಸ್ಥೆ ನಡೆಯದಿದ್ದಲ್ಲಿ ಅಕ್ಟೋಬರ್ ತಿಂಗಳಾಂತ್ಯದಲ್ಲಿ ಮಂಗಳೂರಿನ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ಸಭೆ ತೀರ್ಮಾನಿಸಿದೆ.

Advertisement

ಇದರೊಂದಿಗೆ ಸಾಲಮನ್ನಾ ಯೋಜನೆ ಪ್ರತೀ ರೈತರಿಗೆ ತಲುಪುವಂತಾಗಲು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರು, ಜಿಲ್ಲಾ ಸಹಕಾರಿ ಬ್ಯಾಂಕ್ ಅಧಿಕಾರಿಗಳ ಭೇಟಿ ನೀಡಿ ಚರ್ಚಿಸಲು ನಿರ್ಧರಿಸಲಾಯಿತು. ಡಿಸಿಸಿ ಬ್ಯಾಂಕ್ ಅಧಿಕಾರಿಗಳು ಅರ್ಹ ಫಲಾನುಭವಿಗಳ ಮಾಹಿತಿಯನ್ನು ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳಿಗೆ ನೀಡಿ ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸುವ ಮೂಲಕ ಪಾರದರ್ಶಕತೆಯನ್ನ ಕಾಪಾಡಬೇಕು ಎಂದು ಸಭೆ ಒಕ್ಕೊರಲಿನಿಂದ ಆಗ್ರಹಿಸಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಕೊನೆಯ ಹಂತದಲ್ಲಿ ನೀಡಿದ 50 ಸಾವಿರ ಸಾಲಮನ್ನಾದ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಸಾಲ ದೊರೆಯದಿದ್ದರಿಂದ ಸಮ್ಮಿಶ್ರ ಸರಕಾರದ ಸಾಲಮನ್ನಾ ಯೋಜನೆ ಮೊತ್ತ ಪೂರ್ತಿ ಪಡೆಯಲು ವಿಫಲರಾಗಿರುವ ಬಗ್ಗೆ ಸಭೆ ಚರ್ಚೆ ನಡೆಸಿತು.

ವೇದಿಕೆ ಸಂಚಾಲಕರಾದ ಕಿಶೋರ್ ಶಿರಾಡಿ, ಪ್ರಮುಖರಾದ ಜಯಪ್ರಕಾಶ್ ಕೂಜುಗೋಡು, ದಾಮೋದರ ಡಿ.ಎಂ., ಐನೆಕಿದು- ಸುಬ್ರಹ್ಮಣ್ಯ ಕೃಷಿ ಪತ್ತಿನ ಸಂಘದ ಅಧ್ಯಕ್ಷ ರವೀಂದ್ರಕುಮಾರ್ ರುದ್ರಪಾದ, ಮುರುಳ್ಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಎಚ್. ಮುರುಳ್ಯ, ಹಿರಿಯ ಸಹಕಾರಿ ಧುರೀಣರಾದ ಪ್ರಸನ್ನ ಕೆ. ಎಣ್ಮೂರು, ಅಚ್ಯುತ ಗೌಡ ಏನೆಕಲ್ಲು, ವಿಜಯ್ ಶೀರಾಡಿ, ಕುಟ್ರುಪ್ಪಾಡಿ, ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೊರಗಪ್ಪ ಗೌಡ ಬಲ್ಯ. ಭವಾನಿ ಶಂಕರ್ ಪೈಲಾಜೆ ಮತ್ತಿತರರ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

4 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

13 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago