Advertisement
ಸುದ್ದಿಗಳು

ಬೆಳೆಸಾಲದ ಗೊಂದಲ ನಿವಾರಣೆಗೆ ಕ್ರಮ | ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಬದ್ಧ | ಸಹಕಾರ ಭಾರತೀ ನಿಯೋಗಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ |

Share

ಮಂಗಳೂರು: ಬೆಳೆಸಾಲದ ಗೊಂದಲ ನಿವಾರಣೆಗೆ ಸರಕಾರ ತಕ್ಷಣವೇ ಕ್ರಮ ಕೈಗೊಳ್ಳಲಿದ್ದು ಯಾವುದೇ ಆತಂಕ ಬೇಡ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಹಕಾರಿ ಭಾರತೀ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಇದೇ ವೇಳೆ ಅಡಿಕೆ ಬೆಳೆಗಾರರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಲ್ಲಾ ಕೃಷಿಕರ ಪರ ಸರಕಾರ ಇದೆ ಯಾವುದೇ ಸಮಸ್ಯೆಯಾದಾಗ ತಿಳಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಸಹಕಾರಿ ಭಾರತೀ ರಾಜ್ಯಾಧ್ಯಕ್ಷ , ಕ್ಯಾಂಪ್ಕೋ ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ನೇತೃತ್ವದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬೆಳೆ ಸಾಲಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂದಿರುವ ಆದೇಶದ ಪ್ರಕಾರ ಒಂದು ರೇಶನ್ ಕಾರ್ಡ್ ಮೂಲಕ ಒಬ್ಬ ಕೃಷಿಕನಿಗೆ ಮಾತ್ರವೇ ಬೆಳೆಸಾಲ ಸೇರಿದಂತೆ ಇತರ ಗೊಂದಲಗಳು ಇದ್ದವು. ಇದನ್ನು ನಿವಾರಣೆ ಮಾಡಬೇಕು ಎಂದು ಒತ್ತಾಯ ಮಾಡಿದರು. ತಕ್ಷಣವೇ ಸಹಕಾರಿ ಸಚಿವ ಎಸ್ ಟಿ ಸೋಮಶೇಖರ್  ಜೊತೆ ಮಾತುಕತೆ ನಡೆಸಿ ವಾರದೊಳಗೆ  ಗೊಂದಲ ನಿವಾರಣೆ ಮಾಡುವಂತೆ ಸೂಚಿಸಿದರು.

ಇದೇ ಸಂದರ್ಭ ಅಡಿಕೆ ಬೆಳೆಗಾರರ ಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯದ ಎಲ್ಲಾ ಕೃಷಿಕರ ಪರ ಸರಕಾರ ಇದೆ. ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆಯಾದರೆ ತಕ್ಷಣವೇ ಸರಕಾರದ ಗಮನಕ್ಕೆ ತರಲು ತಿಳಿಸಿದರು.

ಈ ಸಂದರ್ಭ ಪುತ್ತೂರು ಶಾಸಕ ಸಂಜೀವ ಮಠಂದೂರು , ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮೊದಲಾದವರು ಇದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

17 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

18 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

18 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

21 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago