ಸುಳ್ಯ: ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಿಸಿ ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 27 ಮಂದಿ ಸದಸ್ಯರು ಹಿರಿಯ ಸಹಕಾರಿ ಪ್ರಸನ್ನ ಎಣ್ಮೂರು ನೇತೃತ್ವದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಸಹಕಾರದೊಂದಿಗೆ ಮಂಗಳೂರಿನ ಗ್ರಾಹಕ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇಲ್ಲಿನ ಸಂಘದ ಸದಸ್ಯರು ಸುಮಾರು 59 ಸಾವಿರದಷ್ಟು ಬೆಳೆವಿಮೆಗೆ ಪ್ರೀಮಿಯಂ ಪಾವತಿ ಮಾಡಿದ್ದರು. ಆದರೆ ಬೆಳೆವಿಮೆ ಪರಿಹಾರ ಇದುವರೆಗೂ ಲಭ್ಯವಾಗಿಲ್ಲ. ಆದರೆ ಅದೇ ಗ್ರಾಹಕ ಪಕ್ಕದ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಬೆಳೆ ವಿಮೆ ಪಾವತಿ ಮಾಡಿದ ಕೃಷಿಕರಿಗೆ ಪರಿಹಾರ ಲಭ್ಯವಾಗಿದೆ. ಒಂದೇ ಗ್ರಾಮದಲ್ಲಿ ಈ ವ್ಯತ್ಯಾಸವಾಗಿರುವುದು ಹೇಗೆ ಎಂಬ ಪ್ರಶ್ನೆ ಇದ್ದರೆ, ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಪ್ರೀಮಿಯಂ ಪಾವತಿ ಮಾಡಿರುವ 27 ಮಂದಿ ಕೃಷಿಕರು ಇದೀಗ ಗ್ರಾಹಕ ನ್ಯಾಯಾಲಯದ ಮುಂದೆ ಹೋಗಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…
ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…