ಸುಳ್ಯ: ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಿಸಿ ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 27 ಮಂದಿ ಸದಸ್ಯರು ಹಿರಿಯ ಸಹಕಾರಿ ಪ್ರಸನ್ನ ಎಣ್ಮೂರು ನೇತೃತ್ವದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಸಹಕಾರದೊಂದಿಗೆ ಮಂಗಳೂರಿನ ಗ್ರಾಹಕ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇಲ್ಲಿನ ಸಂಘದ ಸದಸ್ಯರು ಸುಮಾರು 59 ಸಾವಿರದಷ್ಟು ಬೆಳೆವಿಮೆಗೆ ಪ್ರೀಮಿಯಂ ಪಾವತಿ ಮಾಡಿದ್ದರು. ಆದರೆ ಬೆಳೆವಿಮೆ ಪರಿಹಾರ ಇದುವರೆಗೂ ಲಭ್ಯವಾಗಿಲ್ಲ. ಆದರೆ ಅದೇ ಗ್ರಾಹಕ ಪಕ್ಕದ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಬೆಳೆ ವಿಮೆ ಪಾವತಿ ಮಾಡಿದ ಕೃಷಿಕರಿಗೆ ಪರಿಹಾರ ಲಭ್ಯವಾಗಿದೆ. ಒಂದೇ ಗ್ರಾಮದಲ್ಲಿ ಈ ವ್ಯತ್ಯಾಸವಾಗಿರುವುದು ಹೇಗೆ ಎಂಬ ಪ್ರಶ್ನೆ ಇದ್ದರೆ, ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಪ್ರೀಮಿಯಂ ಪಾವತಿ ಮಾಡಿರುವ 27 ಮಂದಿ ಕೃಷಿಕರು ಇದೀಗ ಗ್ರಾಹಕ ನ್ಯಾಯಾಲಯದ ಮುಂದೆ ಹೋಗಿದ್ದಾರೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…