ಸುಳ್ಯ: ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಿಸಿ ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 27 ಮಂದಿ ಸದಸ್ಯರು ಹಿರಿಯ ಸಹಕಾರಿ ಪ್ರಸನ್ನ ಎಣ್ಮೂರು ನೇತೃತ್ವದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಸಹಕಾರದೊಂದಿಗೆ ಮಂಗಳೂರಿನ ಗ್ರಾಹಕ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇಲ್ಲಿನ ಸಂಘದ ಸದಸ್ಯರು ಸುಮಾರು 59 ಸಾವಿರದಷ್ಟು ಬೆಳೆವಿಮೆಗೆ ಪ್ರೀಮಿಯಂ ಪಾವತಿ ಮಾಡಿದ್ದರು. ಆದರೆ ಬೆಳೆವಿಮೆ ಪರಿಹಾರ ಇದುವರೆಗೂ ಲಭ್ಯವಾಗಿಲ್ಲ. ಆದರೆ ಅದೇ ಗ್ರಾಹಕ ಪಕ್ಕದ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಬೆಳೆ ವಿಮೆ ಪಾವತಿ ಮಾಡಿದ ಕೃಷಿಕರಿಗೆ ಪರಿಹಾರ ಲಭ್ಯವಾಗಿದೆ. ಒಂದೇ ಗ್ರಾಮದಲ್ಲಿ ಈ ವ್ಯತ್ಯಾಸವಾಗಿರುವುದು ಹೇಗೆ ಎಂಬ ಪ್ರಶ್ನೆ ಇದ್ದರೆ, ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಪ್ರೀಮಿಯಂ ಪಾವತಿ ಮಾಡಿರುವ 27 ಮಂದಿ ಕೃಷಿಕರು ಇದೀಗ ಗ್ರಾಹಕ ನ್ಯಾಯಾಲಯದ ಮುಂದೆ ಹೋಗಿದ್ದಾರೆ.
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…