ಸುಳ್ಯ: ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಿಸಿ ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 27 ಮಂದಿ ಸದಸ್ಯರು ಹಿರಿಯ ಸಹಕಾರಿ ಪ್ರಸನ್ನ ಎಣ್ಮೂರು ನೇತೃತ್ವದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಸಹಕಾರದೊಂದಿಗೆ ಮಂಗಳೂರಿನ ಗ್ರಾಹಕ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇಲ್ಲಿನ ಸಂಘದ ಸದಸ್ಯರು ಸುಮಾರು 59 ಸಾವಿರದಷ್ಟು ಬೆಳೆವಿಮೆಗೆ ಪ್ರೀಮಿಯಂ ಪಾವತಿ ಮಾಡಿದ್ದರು. ಆದರೆ ಬೆಳೆವಿಮೆ ಪರಿಹಾರ ಇದುವರೆಗೂ ಲಭ್ಯವಾಗಿಲ್ಲ. ಆದರೆ ಅದೇ ಗ್ರಾಹಕ ಪಕ್ಕದ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಬೆಳೆ ವಿಮೆ ಪಾವತಿ ಮಾಡಿದ ಕೃಷಿಕರಿಗೆ ಪರಿಹಾರ ಲಭ್ಯವಾಗಿದೆ. ಒಂದೇ ಗ್ರಾಮದಲ್ಲಿ ಈ ವ್ಯತ್ಯಾಸವಾಗಿರುವುದು ಹೇಗೆ ಎಂಬ ಪ್ರಶ್ನೆ ಇದ್ದರೆ, ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಪ್ರೀಮಿಯಂ ಪಾವತಿ ಮಾಡಿರುವ 27 ಮಂದಿ ಕೃಷಿಕರು ಇದೀಗ ಗ್ರಾಹಕ ನ್ಯಾಯಾಲಯದ ಮುಂದೆ ಹೋಗಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…