ಸುಳ್ಯ: ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಿಸಿ ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 27 ಮಂದಿ ಸದಸ್ಯರು ಹಿರಿಯ ಸಹಕಾರಿ ಪ್ರಸನ್ನ ಎಣ್ಮೂರು ನೇತೃತ್ವದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಸಹಕಾರದೊಂದಿಗೆ ಮಂಗಳೂರಿನ ಗ್ರಾಹಕ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇಲ್ಲಿನ ಸಂಘದ ಸದಸ್ಯರು ಸುಮಾರು 59 ಸಾವಿರದಷ್ಟು ಬೆಳೆವಿಮೆಗೆ ಪ್ರೀಮಿಯಂ ಪಾವತಿ ಮಾಡಿದ್ದರು. ಆದರೆ ಬೆಳೆವಿಮೆ ಪರಿಹಾರ ಇದುವರೆಗೂ ಲಭ್ಯವಾಗಿಲ್ಲ. ಆದರೆ ಅದೇ ಗ್ರಾಹಕ ಪಕ್ಕದ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಬೆಳೆ ವಿಮೆ ಪಾವತಿ ಮಾಡಿದ ಕೃಷಿಕರಿಗೆ ಪರಿಹಾರ ಲಭ್ಯವಾಗಿದೆ. ಒಂದೇ ಗ್ರಾಮದಲ್ಲಿ ಈ ವ್ಯತ್ಯಾಸವಾಗಿರುವುದು ಹೇಗೆ ಎಂಬ ಪ್ರಶ್ನೆ ಇದ್ದರೆ, ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಪ್ರೀಮಿಯಂ ಪಾವತಿ ಮಾಡಿರುವ 27 ಮಂದಿ ಕೃಷಿಕರು ಇದೀಗ ಗ್ರಾಹಕ ನ್ಯಾಯಾಲಯದ ಮುಂದೆ ಹೋಗಿದ್ದಾರೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…