ಸುಳ್ಯ: ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಿಸಿ ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 27 ಮಂದಿ ಸದಸ್ಯರು ಹಿರಿಯ ಸಹಕಾರಿ ಪ್ರಸನ್ನ ಎಣ್ಮೂರು ನೇತೃತ್ವದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಸಹಕಾರದೊಂದಿಗೆ ಮಂಗಳೂರಿನ ಗ್ರಾಹಕ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇಲ್ಲಿನ ಸಂಘದ ಸದಸ್ಯರು ಸುಮಾರು 59 ಸಾವಿರದಷ್ಟು ಬೆಳೆವಿಮೆಗೆ ಪ್ರೀಮಿಯಂ ಪಾವತಿ ಮಾಡಿದ್ದರು. ಆದರೆ ಬೆಳೆವಿಮೆ ಪರಿಹಾರ ಇದುವರೆಗೂ ಲಭ್ಯವಾಗಿಲ್ಲ. ಆದರೆ ಅದೇ ಗ್ರಾಹಕ ಪಕ್ಕದ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಬೆಳೆ ವಿಮೆ ಪಾವತಿ ಮಾಡಿದ ಕೃಷಿಕರಿಗೆ ಪರಿಹಾರ ಲಭ್ಯವಾಗಿದೆ. ಒಂದೇ ಗ್ರಾಮದಲ್ಲಿ ಈ ವ್ಯತ್ಯಾಸವಾಗಿರುವುದು ಹೇಗೆ ಎಂಬ ಪ್ರಶ್ನೆ ಇದ್ದರೆ, ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಪ್ರೀಮಿಯಂ ಪಾವತಿ ಮಾಡಿರುವ 27 ಮಂದಿ ಕೃಷಿಕರು ಇದೀಗ ಗ್ರಾಹಕ ನ್ಯಾಯಾಲಯದ ಮುಂದೆ ಹೋಗಿದ್ದಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…