ಸುಳ್ಯ: ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಿಸಿ ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 27 ಮಂದಿ ಸದಸ್ಯರು ಹಿರಿಯ ಸಹಕಾರಿ ಪ್ರಸನ್ನ ಎಣ್ಮೂರು ನೇತೃತ್ವದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಸಹಕಾರದೊಂದಿಗೆ ಮಂಗಳೂರಿನ ಗ್ರಾಹಕ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇಲ್ಲಿನ ಸಂಘದ ಸದಸ್ಯರು ಸುಮಾರು 59 ಸಾವಿರದಷ್ಟು ಬೆಳೆವಿಮೆಗೆ ಪ್ರೀಮಿಯಂ ಪಾವತಿ ಮಾಡಿದ್ದರು. ಆದರೆ ಬೆಳೆವಿಮೆ ಪರಿಹಾರ ಇದುವರೆಗೂ ಲಭ್ಯವಾಗಿಲ್ಲ. ಆದರೆ ಅದೇ ಗ್ರಾಹಕ ಪಕ್ಕದ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಬೆಳೆ ವಿಮೆ ಪಾವತಿ ಮಾಡಿದ ಕೃಷಿಕರಿಗೆ ಪರಿಹಾರ ಲಭ್ಯವಾಗಿದೆ. ಒಂದೇ ಗ್ರಾಮದಲ್ಲಿ ಈ ವ್ಯತ್ಯಾಸವಾಗಿರುವುದು ಹೇಗೆ ಎಂಬ ಪ್ರಶ್ನೆ ಇದ್ದರೆ, ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಪ್ರೀಮಿಯಂ ಪಾವತಿ ಮಾಡಿರುವ 27 ಮಂದಿ ಕೃಷಿಕರು ಇದೀಗ ಗ್ರಾಹಕ ನ್ಯಾಯಾಲಯದ ಮುಂದೆ ಹೋಗಿದ್ದಾರೆ.
ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…
ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…