ಸುಳ್ಯ: ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಿಸಿ ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 27 ಮಂದಿ ಸದಸ್ಯರು ಹಿರಿಯ ಸಹಕಾರಿ ಪ್ರಸನ್ನ ಎಣ್ಮೂರು ನೇತೃತ್ವದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಸಹಕಾರದೊಂದಿಗೆ ಮಂಗಳೂರಿನ ಗ್ರಾಹಕ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇಲ್ಲಿನ ಸಂಘದ ಸದಸ್ಯರು ಸುಮಾರು 59 ಸಾವಿರದಷ್ಟು ಬೆಳೆವಿಮೆಗೆ ಪ್ರೀಮಿಯಂ ಪಾವತಿ ಮಾಡಿದ್ದರು. ಆದರೆ ಬೆಳೆವಿಮೆ ಪರಿಹಾರ ಇದುವರೆಗೂ ಲಭ್ಯವಾಗಿಲ್ಲ. ಆದರೆ ಅದೇ ಗ್ರಾಹಕ ಪಕ್ಕದ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಬೆಳೆ ವಿಮೆ ಪಾವತಿ ಮಾಡಿದ ಕೃಷಿಕರಿಗೆ ಪರಿಹಾರ ಲಭ್ಯವಾಗಿದೆ. ಒಂದೇ ಗ್ರಾಮದಲ್ಲಿ ಈ ವ್ಯತ್ಯಾಸವಾಗಿರುವುದು ಹೇಗೆ ಎಂಬ ಪ್ರಶ್ನೆ ಇದ್ದರೆ, ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಪ್ರೀಮಿಯಂ ಪಾವತಿ ಮಾಡಿರುವ 27 ಮಂದಿ ಕೃಷಿಕರು ಇದೀಗ ಗ್ರಾಹಕ ನ್ಯಾಯಾಲಯದ ಮುಂದೆ ಹೋಗಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…