ಬೆಳ್ತಂಗಡಿ: ತಾಲೂಕಿನ ಹಲವೆಡೆ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ಹಾಗೂ ಕುಕ್ಕಾವು ಪಾಲನಾ ಕೇಂದ್ರಕ್ಕೆ ಸನ್ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರವಾಹದಲ್ಲಿ ಮನೆ ಸಂಪೂರ್ಣ ನಾಶವಾದ ಸಂತ್ರಸ್ತರಿಗೆ ಹೊಸ ಮನೆ ಕಟ್ಟಿಕೊಳ್ಳಲು ರೂಪಾಯಿ 5 ಲಕ್ಷ, ಭಾಗಶಃ ನಾಶವಾದವರಿಗೆ ಎಲ್ಲಾ ರೀತಿಯ ರಿಪೇರಿ ಕೆಲಸಗಳಿಗೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮಾನ್ಯ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಭೂಮಿ ಪತ್ರ ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಮನೆ ಕಟ್ಟಿಕೊಳ್ಳಲು ಭೂಮಿ ಗುರುತಿಸಿ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಹಾಗೆಯೇ ಸಂತ್ರಸ್ತರಿಗೆ ತಕ್ಷಣದಲ್ಲಿ ರೂಪಾಯಿ 10,000.00 ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಸಂತ್ರಸ್ತರು ಹೊಸ ಮನೆ ಕಟ್ಟಿಕೊಳ್ಳುವವವರೆಗೆ ಮಾಸಿಕ 5000.00 ರೂಪಾಯಿ ಬಾಡಿಗೆ ನೀಡಲು ಮಾನ್ಯ ಮುಖ್ಯಮಂತ್ರಿಗಳು ಆದೇಶಿಸಿದರು.
ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕರುಗಳು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಧಿಕಾರಿ ವರ್ಗ ಮುಖ್ಯಮಂತ್ರಿಗಳ ಜೊತೆಗಿದ್ದರು.
ಅತೀ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…