ಬೆಳ್ತಂಗಡಿಯಲ್ಲಿ ಸಿರಿಧಾನ್ಯ ಕೆಫೆ ಶುಭಾರಂಭ

May 27, 2019
11:00 PM

ಬೆಳ್ತಂಗಡಿ :ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಆವರಣದಲ್ಲಿ ಸಿರಿ ಗ್ರಾಮೋದ್ಯೋಗ ಸಂಸ್ಥೆ ಆಶ್ರಯದಲ್ಲಿ ನೂತನ ಸಿರಿಧಾನ್ಯ ಕೆಫೆ ಉದ್ಘಾಟನೆಗೊಂಡಿತು.

Advertisement
Advertisement

ಧರ್ಮಸ್ಥಳದ ಶ್ರದ್ಧಾ ಅಮಿತ್ ಸಿರಿಧಾನ್ಯ ಕೆಫೆಯನ್ನು ಉದ್ಘಾಟಿಸಿ, ಇಂದು ಪಾಶ್ಚಾತ್ಯ ಆಹಾರ ಪದ್ಧತಿಯ ಅವಲಂಬನೆ ಹೆಚ್ಚಾಗುತ್ತಿದ್ದು, ಭಾರತೀಯ ಮೂಲ ಆಹಾರ ಪದ್ಧತಿ ಮರೆಯಾಗುತ್ತಿದೆ. ಸಿರಿಧಾನ್ಯದಂತಹ ಪಾರಂಪರಿಕ ಆಹಾರ ಪದ್ಧತಿಯಿಂದ ಆರೋಗ್ಯ ವರ್ಧನೆಯಾಗುತ್ತದೆ ಎಂದು  ಹೇಳಿದರು. ಮಾತೆಯರು ತಮ್ಮ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಲು ಆಹಾರ ತಜ್ಞರಾಗುವ ಅವಶ್ಯಕತೆ ಇದೆ. ನಮ್ಮ ಹಿರಿಯರು ಅನುಸರಿಸುತ್ತಿದ್ದ ಪಾರಂಪರಿಕ ಆಹಾರ ಪದ್ಧತಿಯ ನಿರ್ಲಕ್ಷ ಹಾಗೂ ಪಾಶ್ಚಾತ್ಯ ಆಹಾರ ಕ್ರಮದ ಅವಲಂಬನೆಯಿಂದಾಗಿ ಇಂದು ಸಣ್ಣ ಮಕ್ಕಳು ಅನೇಕ ರೋಗಗಳಿಂದ ಪೀಡಿತರಾಗುತ್ತಾರೆ. ಆದುದರಿಂದ ನಾವು ನಮ್ಮ ಮೂಲ ಆಹಾರ ಪದ್ಧತಿಯನ್ನು ಇಂದಿನ ಯುವ ಜನಾಂಗಕ್ಕೆ ಪರಿಚಯಿಸಬೇಕು ಎಂದು ಅವರು ಸಲಹೆ ನೀಡಿದರು.

Advertisement

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಮಾತನಾಡಿ ಧಾರವಾಡದಲ್ಲಿ ಮೂರು ಕೋಟಿ ರೂ. ವೆಚ್ಚದಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕ ಹಾಗೂ ಪ್ರಯೋಗಲಾಯ ನಿರ್ಮಿಸಲಾಗಿದೆ. ಸಿರಿ ಸಿರಿಧಾನ್ಯ ಬೆಳೆಗಾರರಿಗೆ ಇದರಿಂದ ತುಂಬಾ ಪ್ರಯೋಜನವಾಗಲಿದೆ ಎಂದು ಅವರು ಹೇಳಿದರು.
ದೇಹಕ್ಕೆ ತಂಪು ನೀಡುವ ಸಿರಿಧಾನ್ಯ ಬಳಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಉಪಯುಕ್ತವಾದುದರಿಂದ ಸಿರಿಧಾನ್ಯ ಕೆಫೆ ಪ್ರಾರಂಭಿಸಲಾಗಿದೆ ಎಂದರು.
ಧಾರವಾಡದ ಸಿರಿಧಾನ್ಯ ಆಹಾರ ತಜ್ಞೆ ಡಾ. ಶಕುಂತಲಾ ಸವದತ್ತಿ ಮಾಸೂರು ಮತ್ತು ಸಾವಯವ ಕೃಷಿಕ ಭದ್ರಾವತಿಯ ಈಶ್ವರನ್ ತೀರ್ಥ ಸಿರಿಧಾನ್ಯ ಬಳಕೆಯ ಮಹತ್ವದ ಬಗ್ಯೆ ಮಾಹಿತಿ ನೀಡಿದರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್, ಕಾರ್ಯದರ್ಶಿ ಡಾ. ಬಿ. ಯಶೋವರ್ಮ, ಸೋನಿಯಾವರ್ಮ ಹಾಗೂ ನಿರ್ದೇಶಕರಾದ ಬೂದಪ್ಪ ಗೌಡ ಮತ್ತು ಮಮತಾ ರಾವ್ ಉಪಸ್ಥಿತರಿದ್ದರು.
ಸಿರಿ ಸಂಸ್ಥೆಯ ನಿರ್ದೇಶಕಿ ಮನೋರಮಾ ಭಟ್ ಸ್ವಾಗತಿಸಿದರು. ಯೋಜನಾಧಿಕಾರಿ ರೋಹಿತಾಕ್ಷ ಧನ್ಯವಾದವಿತ್ತರು. ರಾಮ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

 

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಗಾಲದ ಪರಿಣಾಮ | ತರಕಾರಿ ಬೆಲೆ ಏರಿಕೆಯ ಬಿಸಿ | ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ…. ಎಲ್ಲವೂ ದರ ಏರಿಕೆ |.
April 25, 2024
2:39 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಅಡಿಕೆ ಆಮದು ಒಪ್ಪಂದು ರದ್ದು…! | ಭರವಸೆ ನೀಡಿದ ಕಾಂಗ್ರೆಸ್‌ |
April 24, 2024
2:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror