Advertisement
ಧಾರ್ಮಿಕ

ಬೆಳ್ತಂಗಡಿ ಜೈನ್ ಮಿಲನ್ ಪ್ರಾಯೋಜಕತ್ವದಲ್ಲಿ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆ

Share

ಉಜಿರೆ: ದ್ರವ್ಯ ಲೇಷ್ಯೆ ಮತ್ತು ಭಾವ ಲೇಷ್ಯೆಯಿಂದ ದೇಹ ಮತ್ತು ಮನಸ್ಸು ಪರಿಶುದ್ಧವಾಗುತ್ತದೆ. ದೇಹವನ್ನು ಸುಗಂಧ ದ್ರವ್ಯಗಳಿಂದ ಪರಿಶುದ್ಧಗೊಳಿಸಬಹುದು. ದೇಹವನ್ನು ಸುಗಂಧ ದ್ರವ್ಯಗಳಿಂದ ಪರಿಶುದ್ಧಗೊಳಿಸಿದರೆ ಜಪ, ತಪ, ಧ್ಯಾನ, ಸತ್ಸಂಗ, ಭಜನೆ, ಪೂಜೆ ಮೊದಲಾದ ಕ್ರಿಯೆಗಳಿಂದ ನಮ್ಮ ಭಾವನೆಗಳು ಪರಿಶುದ್ಧವಾಗಿ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ. ಭಜನೆಯಿಂದ ಮಾನಸಿಕ ಪರಿವರ್ತನೆ ಆಗುತ್ತದೆ ಹಾಗೂ ಶ್ರದ್ಧೆ ಮತ್ತು ಸ್ಪರ್ಧೆಯಿಂದ ಸಾಮಾಜಿಕ ಸುಧಾರಣೆಯಾಗುತ್ತದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು.

ಬೆಳ್ತಂಗಡಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಬೆಳ್ತಂಗಡಿ ಜೈನ್ ಮಿಲನ್ ಪ್ರಾಯೋಜಕತ್ವದಲ್ಲಿ ಆಯೋಜಿಸಿದ ಮಂಗಳೂರು ವಿಭಾಗದಜಿನ ಭಜನಾ ಸ್ಪರ್ಧೆಯನ್ನು ಅವರು ಭಾನುವಾರ ಉದ್ಘಾಟಿಸಿ ಮಾತನಾಡಿದರು. ಬಸದಿಗೆ ಹೋದಾಗ ಎಲ್ಲರೂ ದರ್ಶನ ಸ್ತುತಿಯನ್ನು ಹಾಡಬೇಕು. ಪಂಚನಮಸ್ಕಾರ ಮಂತ್ರ ಪಠಣದೊಂದಿಗೆ, ಶ್ಲೋಕಗಳನ್ನು, ಅಷ್ಟಕಗಳನ್ನು ಹೇಳಬೇಕು. ಜಾತಿಜೈನರು ನೀತಿಜೈನರೂ ಆಗಬೇಕು. ಪ್ರತಿ ಮನೆಯಲ್ಲಿಯೂ ಭಜನೆಯಿಂದ ಸಾಮಾಜಿಕ ಪರಿವರ್ತನೆಯಾಗುತ್ತದೆ. ಭಜನಾ ಸಂಸ್ಕೃತಿಯನ್ನು ಮುಂದಿನ ಜನಾಂಗಕ್ಕೂ ನಾವು ಹಸ್ತಾಂತರಿಸಿ ಆರೋಗ್ಯಪೂರ್ಣ, ಸುಸಂಸ್ಕೃತ ಸಮಾಜ ರೂಪಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಅಲ್ಪಸಂಖ್ಯಾತರಾದ ಜೈನರು ತಮ್ಮ ಪರಿಶುದ್ಧ ಆಚಾರ-ವಿಚಾರ, ನಡೆ-ನುಡಿ ಹಾಗೂ ವ್ರತ-ನಿಯಮಗಳ ಪಾಲನೆಯೊಂದಿಗೆ ಸಮಾಜಕ್ಕೆ ಮಾರ್ಗದರ್ಶಕರಾಗಬೇಕು ಎಂದು ಅವರು ಸಲಹೆ ನೀಡಿದರು.

25 ದೀಪಗಳನ್ನು ಏಕಕಾಲದಲ್ಲಿ ಬೆಳಗಿಸುವುದರೊಂದಿಗೆ ಹೇಮಾವತಿ ವೀ. ಹೆಗ್ಗಡೆಯವರು ಬೆಳ್ತಂಗಡಿ ಜೈನ್ ಮಿಲನ್ ರಜತ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿದರು. ನೆರೆ ಸಂತ್ರಸ್ತರಾದ ನೇಮಿರಾಜ್‍ಜೈನ್ ಮತ್ತು ಕಡಿರುದ್ಯಾವರದ ಉದಯಕುಮಾರ್ ಜೈನ್ ಅವರಿಗೆ ತಲಾ 25,000 ರೂ.ನೆರವು ನೀಡಲಾಯಿತು. ಭಾರತೀಯ ಜೈನ್ ಮಿಲನ್‍ನ ಮಂಗಳೂರು ವಲಯದ ಅಧ್ಯಕ್ಷ ಪುಷ್ಪರಾಜಜೈನ್ ಶುಭಾಶಂಸನೆ ಮಾಡಿ, ರಾಜ್ಯದಲ್ಲಿ 350 ತಂಡಗಳ ಹತ್ತುಸಾವಿರ ಮಂದಿ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಯುವಜನತೆ ಭಜನೆಯಲ್ಲಿ ಆಸಕ್ತಿ ಮತ್ತು ಉತ್ಸಾಹದಿಂದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು. 2020ರ ಜನವರಿ 4 ಮತ್ತು 5 ರಂದು ಧಾರವಾಡದಲ್ಲಿ ರಾಜ್ಯ ಮಟ್ಟದ ಭಜನಾ ಸ್ಪರ್ಧೆ ನಡೆಯಲಿದೆ ಎಂದು ಅವರು ಪ್ರಕಟಿಸಿದರು.

ಬೆಳ್ತಂಗಡಿ ಜೈನ್ ಮಿಲನ್ ಸ್ಥಾಪಕಾಧ್ಯಕ್ಷ ಪಡಂಗಡಿ ಭೋಜರಾಜ ಹೆಗ್ಡೆ ಮತ್ತು ನಿರ್ದೇಶಕರುಗಳು ಉಪಸ್ಥಿತರಿದ್ದರು. ಉಜಿರೆಯ ಡಾ. ಬಿ. ಯಶೋವರ್ಮ ಸ್ವಾಗತಿಸಿದರು. ಬಂಟ್ವಾಳದ ಸುದರ್ಶನ ಜೈನ್‍ ಧನ್ಯವಾದವಿತ್ತರು. ಡಾ. ಬಿ.ಪಿ. ಸಂಪತ್‍ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಜೈನ್ ಮಿಲನ್‍ನ ಎಲ್ಲಾ ನಿರ್ದೇಶಕರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಂಗಳೂರು ವಿಭಾಗ ಮಟ್ಟದ ಸ್ಪರ್ಧೆಯಲ್ಲಿ 107 ತಂಡಗಳ 600 ಮಂದಿ ಸದಸ್ಯರು ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

2 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

3 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

6 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

6 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

9 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

18 hours ago