Advertisement
ಸುದ್ದಿಗಳು

ಬೆಳ್ತಂಗಡಿ ನೆರೆ ಸಂತ್ರಸ್ತರಿಗೆ ಆದಿಚುಂಚನಗಿರಿ ಶ್ರೀ ಸಾಂತ್ವನ : ಮಠದಿಂದ ಮಕ್ಕಳಿಗೆ ಉಚಿತ ಶಿಕ್ಷಣ

Share

ಬೆಳ್ತಂಗಡಿ:  ಬೆಳ್ತಂಗಡಿಯ ಪ್ರವಾಹ ಪೀಡಿತ ಪ್ರದೇಶದಲ್ಲಿ ತೊಂದರೆಗೀಡಾದ ಕುಟುಂಬದ ಮಕ್ಕಳಿಗೆ ಪೂರ್ಣ ವಿದ್ಯಾಭ್ಯಾಸಕ್ಕೆ ಆದಿಚುಂಚನಗಿರಿ ಮಠದಿಂದ ಉಚಿತ ವ್ಯವಸ್ಥೆ ನೀಡಲಿದೆ. ಬಟ್ಟೆ ಬರೆ ಏನೆ ಸಮಸ್ಯೆಇದ್ದರು ಮಂಗಳೂರು ಶಾಖಾ ಮಠಕ್ಕೆ ಮಾಹಿತಿ ನೀಡಿದರೆ ಸಂಪೂರ್ಣವಾಗಿ ಸವಲತ್ತು ಒದಗಿಸಲಿದೆ. ತತ್‍ಕ್ಷಣ ಪರಿಹಾರಕ್ಕಾಗಿ ಸಂತ್ರಸ್ತ ಕುಟುಂಬಕ್ಕೆ 10 ಸಾವಿರದಂತೆ ಒದಗಿಸಿದ್ದೇವೆ ನಾವು ಆಯಾಯ ಭಾಗಕ್ಕೆ ವಾಸ್ತವಕ್ಕೆ ಗೋಚರವಾದಂತೆ ಅಲ್ಲೆಲ್ಲ ಆರ್ಥಿಕ ಸಹಾಯ ಒದಗಿಸಿದ್ದೇವೆ ಎಂದು ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಅವರು  ಬೆಳ್ತಂಗಡಿಯ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ನೆರವು ನೀಡಿದರು. ಈ ಸಂದರ್ಭ ಮಾತನಾಡಿದ ಅವರು  1961ರ ಬಳಿಕ ನಾಡುಕಂಡ ಭೀಕರ ಪ್ರವಾಹ ಎದುರಾಗಿದೆ. ದುರಂತಕ್ಕೆ ಕಾರಣ ಹಲವಾರು. ಆದರೆ ಮಲೆನಾಡಲ್ಲಿ ಇರುವವರು ತಾವು ಮಾಡದೆ ಇರುವ ತಪ್ಪಿಗೆ ಹಾನಿ ಎದುರಿಸುವಂತಾಗಿದೆ ಎಂದು  ಹೇಳಿದರು. ಬೆಳ್ತಂಗಡಿ ಪ್ರದೇಶದಲ್ಲಿ ಸಾಕಷ್ಟು ಹಾನಿ ಸಂಭವಿಸಿರುವುದು ಮೇಲ್ನೋಟಕ್ಕೆಕಂಡುಬರುತ್ತಿದೆ. ಬೇರೆಯವರ ಮನೆಯಲ್ಲಿ ಆಶ್ರಯ ಪಡೆದು ಅವರ ಬದುಕನ್ನು ಕಂಡಾಗ ನೋವು, ದುಖಃವಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಸಾಂತ್ವಾನ ಹಾಗು ಕೈಲಾದ ಮಟ್ಟದಲ್ಲಿ ಸಹಾಯ ನೀಡಬೇಕಿದೆ. ಈ ನಿಟ್ಟಿನಲ್ಲಿ ಮಠದಿಂದ ಜಾತ್ಯಾತೀತವಾಗಿ, ಧರ್ಮಾತೀತವಾಗಿ ಭಕ್ತರ ಸ್ಥಿತಿ ನೋಡಿ ಹಾನಿ ತುಂಬಿಕೊಡುವ ಕೆಲಸ ಮಾಡಬೇಕಿದೆ ಎಂದು ಸ್ವಾಮೀಜಿಗಳು ಹೇಳಿದರು.

ಈ ಕಾರ್ಯದಲ್ಲಿ ಶ್ರೀ ಆದಿಚುಂಚನಗಿರಿ ಮಠದ ಬೆಳ್ತಂಗಡಿ ಪುತ್ತೂರು, ಸುಳ್ಯ, ವಿಟ್ಲ ಈ ಭಾಗದ ಭಕ್ತರುಕೈಜೋಡಿಸುವು ಅವಶ್ಯ. ಪ್ರತಿಜಾಗಕ್ಕೂ ಭೇಟಿ ನೀಡಿದ್ದೇವೆ. ಮುಖ್ಯವಾಗಿ ಸರಕಾರ ಮೂಲ ಸೌಕರ್ಯಒದಗಿಸುವ ನಿಟ್ಟಿನಲ್ಲಿ ಶ್ರಮಿಸಬೇಕುಎಂದುಆದಿಚುಂಚನಗಿರಿ ಸ್ವಾಮೀಜಿಗಳು ಹೇಳಿದರು. ಸರಕಾರ ತಮ್ಮ ನಿರ್ಧಾರ ಪ್ರಕಟಿಸಿದೆ. ಈಗಿರುವ ಅನಾಹುತಗಳಿಗೆ ತಲುಪಬೇಕಾದ ಸವಲತ್ತು ಸರಕಾರದಿಂದ ತಲುಪುವ ಭರವಸೆ ನಮಗಿದೆ. ರಾಜ್ಯ ಸರಕಾರ ಮನೆ ಕಟ್ಟುವ ಭರವಸೆ ನೀಡಿದೆ.

ಈ ಸಂದರ್ಭ ಕಾವೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ, ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ಮಾಜಿ ಸಚಿವ ಗಂಗಾಧರಗೌಡ, ಕಾಲಭೈರವೇಶ್ವರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಅಧ್ಯಕ್ಷ ರಂಜನ್ ಜಿ. ಗೌಡ, ಪಟ್ಟಣ ಪಂಚಾಯತ್ ಸದಸ್ಯ ಜಯಾನಂದ ಗೌಡ, ಮತ್ತಿತರರು ಇದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

12 hours ago

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ

ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…

19 hours ago

ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ

ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…

19 hours ago

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…

19 hours ago

ಮೊಟ್ಟೆಯಲ್ಲಿ ಅಪಾಯಕಾರಿ ಕ್ಯಾನ್ಸರ್ ಅಂಶ ಪತ್ತೆ ಎಂಬ ಊಹಪೋಹಗಳಿಗೆ ಬ್ರೇಕ್

ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…

19 hours ago

ಗೃಹಲಕ್ಷ್ಮಿ ಸಹಕಾರ ಬ್ಯಾಂಕ್ ಕಡಿಮೆ ಬಡ್ಡಿಯಲಿ ಸಾಲ ಪಡೆಯಿರಿ

ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…

19 hours ago