Advertisement
ಸುದ್ದಿಗಳು

ಬೆಳ್ತಂಗಡಿ ನೆರೆ ಸಂತ್ರಸ್ತರಿಗೆ ಆದಿಚುಂಚನಗಿರಿ ಶ್ರೀ ಸಾಂತ್ವನ : ಮಠದಿಂದ ಮಕ್ಕಳಿಗೆ ಉಚಿತ ಶಿಕ್ಷಣ

Share

ಬೆಳ್ತಂಗಡಿ:  ಬೆಳ್ತಂಗಡಿಯ ಪ್ರವಾಹ ಪೀಡಿತ ಪ್ರದೇಶದಲ್ಲಿ ತೊಂದರೆಗೀಡಾದ ಕುಟುಂಬದ ಮಕ್ಕಳಿಗೆ ಪೂರ್ಣ ವಿದ್ಯಾಭ್ಯಾಸಕ್ಕೆ ಆದಿಚುಂಚನಗಿರಿ ಮಠದಿಂದ ಉಚಿತ ವ್ಯವಸ್ಥೆ ನೀಡಲಿದೆ. ಬಟ್ಟೆ ಬರೆ ಏನೆ ಸಮಸ್ಯೆಇದ್ದರು ಮಂಗಳೂರು ಶಾಖಾ ಮಠಕ್ಕೆ ಮಾಹಿತಿ ನೀಡಿದರೆ ಸಂಪೂರ್ಣವಾಗಿ ಸವಲತ್ತು ಒದಗಿಸಲಿದೆ. ತತ್‍ಕ್ಷಣ ಪರಿಹಾರಕ್ಕಾಗಿ ಸಂತ್ರಸ್ತ ಕುಟುಂಬಕ್ಕೆ 10 ಸಾವಿರದಂತೆ ಒದಗಿಸಿದ್ದೇವೆ ನಾವು ಆಯಾಯ ಭಾಗಕ್ಕೆ ವಾಸ್ತವಕ್ಕೆ ಗೋಚರವಾದಂತೆ ಅಲ್ಲೆಲ್ಲ ಆರ್ಥಿಕ ಸಹಾಯ ಒದಗಿಸಿದ್ದೇವೆ ಎಂದು ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಅವರು  ಬೆಳ್ತಂಗಡಿಯ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ನೆರವು ನೀಡಿದರು. ಈ ಸಂದರ್ಭ ಮಾತನಾಡಿದ ಅವರು  1961ರ ಬಳಿಕ ನಾಡುಕಂಡ ಭೀಕರ ಪ್ರವಾಹ ಎದುರಾಗಿದೆ. ದುರಂತಕ್ಕೆ ಕಾರಣ ಹಲವಾರು. ಆದರೆ ಮಲೆನಾಡಲ್ಲಿ ಇರುವವರು ತಾವು ಮಾಡದೆ ಇರುವ ತಪ್ಪಿಗೆ ಹಾನಿ ಎದುರಿಸುವಂತಾಗಿದೆ ಎಂದು  ಹೇಳಿದರು. ಬೆಳ್ತಂಗಡಿ ಪ್ರದೇಶದಲ್ಲಿ ಸಾಕಷ್ಟು ಹಾನಿ ಸಂಭವಿಸಿರುವುದು ಮೇಲ್ನೋಟಕ್ಕೆಕಂಡುಬರುತ್ತಿದೆ. ಬೇರೆಯವರ ಮನೆಯಲ್ಲಿ ಆಶ್ರಯ ಪಡೆದು ಅವರ ಬದುಕನ್ನು ಕಂಡಾಗ ನೋವು, ದುಖಃವಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಸಾಂತ್ವಾನ ಹಾಗು ಕೈಲಾದ ಮಟ್ಟದಲ್ಲಿ ಸಹಾಯ ನೀಡಬೇಕಿದೆ. ಈ ನಿಟ್ಟಿನಲ್ಲಿ ಮಠದಿಂದ ಜಾತ್ಯಾತೀತವಾಗಿ, ಧರ್ಮಾತೀತವಾಗಿ ಭಕ್ತರ ಸ್ಥಿತಿ ನೋಡಿ ಹಾನಿ ತುಂಬಿಕೊಡುವ ಕೆಲಸ ಮಾಡಬೇಕಿದೆ ಎಂದು ಸ್ವಾಮೀಜಿಗಳು ಹೇಳಿದರು.

ಈ ಕಾರ್ಯದಲ್ಲಿ ಶ್ರೀ ಆದಿಚುಂಚನಗಿರಿ ಮಠದ ಬೆಳ್ತಂಗಡಿ ಪುತ್ತೂರು, ಸುಳ್ಯ, ವಿಟ್ಲ ಈ ಭಾಗದ ಭಕ್ತರುಕೈಜೋಡಿಸುವು ಅವಶ್ಯ. ಪ್ರತಿಜಾಗಕ್ಕೂ ಭೇಟಿ ನೀಡಿದ್ದೇವೆ. ಮುಖ್ಯವಾಗಿ ಸರಕಾರ ಮೂಲ ಸೌಕರ್ಯಒದಗಿಸುವ ನಿಟ್ಟಿನಲ್ಲಿ ಶ್ರಮಿಸಬೇಕುಎಂದುಆದಿಚುಂಚನಗಿರಿ ಸ್ವಾಮೀಜಿಗಳು ಹೇಳಿದರು. ಸರಕಾರ ತಮ್ಮ ನಿರ್ಧಾರ ಪ್ರಕಟಿಸಿದೆ. ಈಗಿರುವ ಅನಾಹುತಗಳಿಗೆ ತಲುಪಬೇಕಾದ ಸವಲತ್ತು ಸರಕಾರದಿಂದ ತಲುಪುವ ಭರವಸೆ ನಮಗಿದೆ. ರಾಜ್ಯ ಸರಕಾರ ಮನೆ ಕಟ್ಟುವ ಭರವಸೆ ನೀಡಿದೆ.

ಈ ಸಂದರ್ಭ ಕಾವೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ, ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ಮಾಜಿ ಸಚಿವ ಗಂಗಾಧರಗೌಡ, ಕಾಲಭೈರವೇಶ್ವರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಅಧ್ಯಕ್ಷ ರಂಜನ್ ಜಿ. ಗೌಡ, ಪಟ್ಟಣ ಪಂಚಾಯತ್ ಸದಸ್ಯ ಜಯಾನಂದ ಗೌಡ, ಮತ್ತಿತರರು ಇದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

4 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

11 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

11 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

19 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

21 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 day ago