Advertisement
ಸುದ್ದಿಗಳು

ಬೆಳ್ತಂಗಡಿ ನೆರೆ ಸಂತ್ರಸ್ತರಿಗೆ ಆದಿಚುಂಚನಗಿರಿ ಶ್ರೀ ಸಾಂತ್ವನ : ಮಠದಿಂದ ಮಕ್ಕಳಿಗೆ ಉಚಿತ ಶಿಕ್ಷಣ

Share

ಬೆಳ್ತಂಗಡಿ:  ಬೆಳ್ತಂಗಡಿಯ ಪ್ರವಾಹ ಪೀಡಿತ ಪ್ರದೇಶದಲ್ಲಿ ತೊಂದರೆಗೀಡಾದ ಕುಟುಂಬದ ಮಕ್ಕಳಿಗೆ ಪೂರ್ಣ ವಿದ್ಯಾಭ್ಯಾಸಕ್ಕೆ ಆದಿಚುಂಚನಗಿರಿ ಮಠದಿಂದ ಉಚಿತ ವ್ಯವಸ್ಥೆ ನೀಡಲಿದೆ. ಬಟ್ಟೆ ಬರೆ ಏನೆ ಸಮಸ್ಯೆಇದ್ದರು ಮಂಗಳೂರು ಶಾಖಾ ಮಠಕ್ಕೆ ಮಾಹಿತಿ ನೀಡಿದರೆ ಸಂಪೂರ್ಣವಾಗಿ ಸವಲತ್ತು ಒದಗಿಸಲಿದೆ. ತತ್‍ಕ್ಷಣ ಪರಿಹಾರಕ್ಕಾಗಿ ಸಂತ್ರಸ್ತ ಕುಟುಂಬಕ್ಕೆ 10 ಸಾವಿರದಂತೆ ಒದಗಿಸಿದ್ದೇವೆ ನಾವು ಆಯಾಯ ಭಾಗಕ್ಕೆ ವಾಸ್ತವಕ್ಕೆ ಗೋಚರವಾದಂತೆ ಅಲ್ಲೆಲ್ಲ ಆರ್ಥಿಕ ಸಹಾಯ ಒದಗಿಸಿದ್ದೇವೆ ಎಂದು ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಅವರು  ಬೆಳ್ತಂಗಡಿಯ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ನೆರವು ನೀಡಿದರು. ಈ ಸಂದರ್ಭ ಮಾತನಾಡಿದ ಅವರು  1961ರ ಬಳಿಕ ನಾಡುಕಂಡ ಭೀಕರ ಪ್ರವಾಹ ಎದುರಾಗಿದೆ. ದುರಂತಕ್ಕೆ ಕಾರಣ ಹಲವಾರು. ಆದರೆ ಮಲೆನಾಡಲ್ಲಿ ಇರುವವರು ತಾವು ಮಾಡದೆ ಇರುವ ತಪ್ಪಿಗೆ ಹಾನಿ ಎದುರಿಸುವಂತಾಗಿದೆ ಎಂದು  ಹೇಳಿದರು. ಬೆಳ್ತಂಗಡಿ ಪ್ರದೇಶದಲ್ಲಿ ಸಾಕಷ್ಟು ಹಾನಿ ಸಂಭವಿಸಿರುವುದು ಮೇಲ್ನೋಟಕ್ಕೆಕಂಡುಬರುತ್ತಿದೆ. ಬೇರೆಯವರ ಮನೆಯಲ್ಲಿ ಆಶ್ರಯ ಪಡೆದು ಅವರ ಬದುಕನ್ನು ಕಂಡಾಗ ನೋವು, ದುಖಃವಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಸಾಂತ್ವಾನ ಹಾಗು ಕೈಲಾದ ಮಟ್ಟದಲ್ಲಿ ಸಹಾಯ ನೀಡಬೇಕಿದೆ. ಈ ನಿಟ್ಟಿನಲ್ಲಿ ಮಠದಿಂದ ಜಾತ್ಯಾತೀತವಾಗಿ, ಧರ್ಮಾತೀತವಾಗಿ ಭಕ್ತರ ಸ್ಥಿತಿ ನೋಡಿ ಹಾನಿ ತುಂಬಿಕೊಡುವ ಕೆಲಸ ಮಾಡಬೇಕಿದೆ ಎಂದು ಸ್ವಾಮೀಜಿಗಳು ಹೇಳಿದರು.

ಈ ಕಾರ್ಯದಲ್ಲಿ ಶ್ರೀ ಆದಿಚುಂಚನಗಿರಿ ಮಠದ ಬೆಳ್ತಂಗಡಿ ಪುತ್ತೂರು, ಸುಳ್ಯ, ವಿಟ್ಲ ಈ ಭಾಗದ ಭಕ್ತರುಕೈಜೋಡಿಸುವು ಅವಶ್ಯ. ಪ್ರತಿಜಾಗಕ್ಕೂ ಭೇಟಿ ನೀಡಿದ್ದೇವೆ. ಮುಖ್ಯವಾಗಿ ಸರಕಾರ ಮೂಲ ಸೌಕರ್ಯಒದಗಿಸುವ ನಿಟ್ಟಿನಲ್ಲಿ ಶ್ರಮಿಸಬೇಕುಎಂದುಆದಿಚುಂಚನಗಿರಿ ಸ್ವಾಮೀಜಿಗಳು ಹೇಳಿದರು. ಸರಕಾರ ತಮ್ಮ ನಿರ್ಧಾರ ಪ್ರಕಟಿಸಿದೆ. ಈಗಿರುವ ಅನಾಹುತಗಳಿಗೆ ತಲುಪಬೇಕಾದ ಸವಲತ್ತು ಸರಕಾರದಿಂದ ತಲುಪುವ ಭರವಸೆ ನಮಗಿದೆ. ರಾಜ್ಯ ಸರಕಾರ ಮನೆ ಕಟ್ಟುವ ಭರವಸೆ ನೀಡಿದೆ.

ಈ ಸಂದರ್ಭ ಕಾವೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ, ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ಮಾಜಿ ಸಚಿವ ಗಂಗಾಧರಗೌಡ, ಕಾಲಭೈರವೇಶ್ವರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಅಧ್ಯಕ್ಷ ರಂಜನ್ ಜಿ. ಗೌಡ, ಪಟ್ಟಣ ಪಂಚಾಯತ್ ಸದಸ್ಯ ಜಯಾನಂದ ಗೌಡ, ಮತ್ತಿತರರು ಇದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

12 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

13 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago