Advertisement
ಸುದ್ದಿಗಳು

ಬೆಳ್ತಂಗಡಿ ಪ್ರವಾಹ ಪೀಡಿತ ಪ್ರದೇಶಗಳಿಗೆ ವೀರಪ್ಪ ಮೊಯಿಲಿ ಭೇಟಿ

Share

ಬೆಳ್ತಂಗಡಿ : ಪಶ್ಚಿಮ ಘಟ್ಟದಿಂದ ಜರಿತ ಉಂಟಾಗಿ ಅನಾಹುತ ಸಂಭವಿಸಿದ್ದು ಇದು ಮುಂದೆಯೂ ಅಪಾಯಕಾರಿಯಾಗಿದೆ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಜ್ಞಾನಿಗಳ ತಂಡವನ್ನು ಅದ್ಯಯನ ನಡೆಸಿ ಮುಂದೆ ಈ ಪ್ರದೇಶದಲ್ಲಿ ವಾಸಿಸುವ ಕುಟುಂಬಗಳಿಗೆ ವಾಸಿಸಲು ಯೋಗ್ಯವೇ ಎಂಬುದನ್ನು ಪರಿಶೀಲಿಸಬೇಕು ಇಲ್ಲವಾದಲ್ಲಿ ಬದಲಿ ವ್ಯವಸ್ಥೆಯನ್ನು ಮಾಡಬೇಕು ಎಂದು ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯಿಲಿ  ಹೇಳಿದ್ದಾರೆ.

Advertisement
Advertisement

ಅವರು ಶುಕ್ರವಾರ ತಾಲೂಕಿನ ನೆರೆಪೀಡಿತ ಕುಕ್ಕಾವು, ಚಾರ್ಮಾಡಿ ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರವಾಹದಿಂದ ರಾಜ್ಯದಲ್ಲಿ ಸುಮಾರು 250 ಮನೆಗಳು ಪೂರ್ತಿ ಹಾನಿಯಾಗಿದ್ದು  ಸುಮಾರು 68 ಜನ ಪ್ರಾಣ ಕಳೆದುಕೊಂಡಿದ್ದಾರೆ.ರೈತರಿಗೆ ಅನೇಕ ತೊಂದರೆಯಾಗಿದ್ದು ರಸ್ತೆ ಸಂಪರ್ಕಗಳು ಹಾನಿಯಾಗಿದೆ. ಪ್ರವಾಹ ಪ್ರದೇಶಕ್ಕೆ ಪ್ರಧಾನಿಗಳು ಬರದಿದ್ದರೂ ಈಗಿನ ಪರಿಸ್ಥಿತಿಯ ವರದಿಯನ್ನು ಆಧರಿಸಿ ಪರಿಹಾರ ಘೋಷಣೆ ಮಾಡಬೇಕಿತ್ತು. ಈಗಾಗಲೇ ಕಾಂಗ್ರೇಸ್ ಪಕ್ಷವು ಕೇಂದ್ರ ಹಾಗೂ ರಾಜ್ಯ ಸರಕಾರದ ಪ್ರವಾಹ ಪೀಡಿತರನ್ನು ನಿರ್ಲಕ್ಷ್ಯ ವಹಿಸಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಿದ್ದು ಈ ಬಗ್ಗೆ ತಕ್ಷಣ ಪರಿಹಾರ ನೀಡಬೇಕು ಎಂದು ರಾಜ್ಯಪಾಲರಲ್ಲಿ ಮನವಿಯನ್ನು ಮಾಡಿದೆ ಎಂದರು. 2009ರಲ್ಲಿ ಕಾಂಗ್ರೇಸ್ ಆಡಳಿತವಿರುವಾಗ ಪ್ರವಾಹ ಬಂದಿದ್ದು ಆಗಿನ ಪ್ರಧಾನಿ ಮನಮೋಹನ್ ಸಿಂಗ್‍ರವರು ರಾಜ್ಯಕ್ಕೆ ಭೇಟಿ ನೀಡಿ ತಕ್ಷಣ 1600ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದರು ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ, ವಿಧಾನಪರಿಷತ್ ಸದಸ್ಯ, ಕಾಂಗ್ರೇಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಹರ್ಷ ಮೊಯಿಲಿ, ನಗರ ಬ್ಲಾಕ್ ಅಧ್ಯಕ್ಷ ರಾಜಶೇಖರ ಅಜ್ರಿ, ಜಿ.ಪಂ ಸದಸರಾದ ಶೇಖರ ಕುಕ್ಕೇಡಿ, ನಮಿತಾ, ತಾ.ಪಂ ಸದಸ್ಯ ಪ್ರವೀಣ್ ಗೌಡ, ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್, ಮುಖಂಡರಾದ ಶೈಲೇಶ್ ಕುಮಾರ್, ಕೇಶವ ಬೆಳಾಲು, ಈಶ್ವರ ಭಟ್, ಅಶ್ರಫ್ ನೆರಿಯ, ಹರೀಶ ಗೌಡ ಬಂದಾರು, ಲೋಕೇಶ್ವರೀ ವಿನಯಚಂದ್ರ, ಸುಂದರ ಗೌಡ, ಜೆಸೀಂತಾ ಮೋನಿಸ್, ವಿನ್ಸೆಂಟ್ ಮಡಂತ್ಯಾರು, ಅಬ್ದುಲ್ ರಹಿಮಾನ್ ಪಡ್ಪು, ರಮೇಶ ಪೂಜಾರಿ, ಮೆಹಬೂಬ್ ಬೆಳ್ತಂಗಡಿ, ಪ್ರಭಾಕರ ಓಡಿಲ್ನಾಳ, ಅನೂಪ್ ಪಾಯಸ್,ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

14 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

14 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago