Advertisement
ಸುದ್ದಿಗಳು

ಬೆಳ್ತಂಗಡಿ ಪ್ರವಾಹ ಪೀಡಿತ ಪ್ರದೇಶಗಳಿಗೆ ವೀರಪ್ಪ ಮೊಯಿಲಿ ಭೇಟಿ

Share

ಬೆಳ್ತಂಗಡಿ : ಪಶ್ಚಿಮ ಘಟ್ಟದಿಂದ ಜರಿತ ಉಂಟಾಗಿ ಅನಾಹುತ ಸಂಭವಿಸಿದ್ದು ಇದು ಮುಂದೆಯೂ ಅಪಾಯಕಾರಿಯಾಗಿದೆ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಜ್ಞಾನಿಗಳ ತಂಡವನ್ನು ಅದ್ಯಯನ ನಡೆಸಿ ಮುಂದೆ ಈ ಪ್ರದೇಶದಲ್ಲಿ ವಾಸಿಸುವ ಕುಟುಂಬಗಳಿಗೆ ವಾಸಿಸಲು ಯೋಗ್ಯವೇ ಎಂಬುದನ್ನು ಪರಿಶೀಲಿಸಬೇಕು ಇಲ್ಲವಾದಲ್ಲಿ ಬದಲಿ ವ್ಯವಸ್ಥೆಯನ್ನು ಮಾಡಬೇಕು ಎಂದು ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯಿಲಿ  ಹೇಳಿದ್ದಾರೆ.

ಅವರು ಶುಕ್ರವಾರ ತಾಲೂಕಿನ ನೆರೆಪೀಡಿತ ಕುಕ್ಕಾವು, ಚಾರ್ಮಾಡಿ ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರವಾಹದಿಂದ ರಾಜ್ಯದಲ್ಲಿ ಸುಮಾರು 250 ಮನೆಗಳು ಪೂರ್ತಿ ಹಾನಿಯಾಗಿದ್ದು  ಸುಮಾರು 68 ಜನ ಪ್ರಾಣ ಕಳೆದುಕೊಂಡಿದ್ದಾರೆ.ರೈತರಿಗೆ ಅನೇಕ ತೊಂದರೆಯಾಗಿದ್ದು ರಸ್ತೆ ಸಂಪರ್ಕಗಳು ಹಾನಿಯಾಗಿದೆ. ಪ್ರವಾಹ ಪ್ರದೇಶಕ್ಕೆ ಪ್ರಧಾನಿಗಳು ಬರದಿದ್ದರೂ ಈಗಿನ ಪರಿಸ್ಥಿತಿಯ ವರದಿಯನ್ನು ಆಧರಿಸಿ ಪರಿಹಾರ ಘೋಷಣೆ ಮಾಡಬೇಕಿತ್ತು. ಈಗಾಗಲೇ ಕಾಂಗ್ರೇಸ್ ಪಕ್ಷವು ಕೇಂದ್ರ ಹಾಗೂ ರಾಜ್ಯ ಸರಕಾರದ ಪ್ರವಾಹ ಪೀಡಿತರನ್ನು ನಿರ್ಲಕ್ಷ್ಯ ವಹಿಸಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಿದ್ದು ಈ ಬಗ್ಗೆ ತಕ್ಷಣ ಪರಿಹಾರ ನೀಡಬೇಕು ಎಂದು ರಾಜ್ಯಪಾಲರಲ್ಲಿ ಮನವಿಯನ್ನು ಮಾಡಿದೆ ಎಂದರು. 2009ರಲ್ಲಿ ಕಾಂಗ್ರೇಸ್ ಆಡಳಿತವಿರುವಾಗ ಪ್ರವಾಹ ಬಂದಿದ್ದು ಆಗಿನ ಪ್ರಧಾನಿ ಮನಮೋಹನ್ ಸಿಂಗ್‍ರವರು ರಾಜ್ಯಕ್ಕೆ ಭೇಟಿ ನೀಡಿ ತಕ್ಷಣ 1600ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದರು ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ, ವಿಧಾನಪರಿಷತ್ ಸದಸ್ಯ, ಕಾಂಗ್ರೇಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಹರ್ಷ ಮೊಯಿಲಿ, ನಗರ ಬ್ಲಾಕ್ ಅಧ್ಯಕ್ಷ ರಾಜಶೇಖರ ಅಜ್ರಿ, ಜಿ.ಪಂ ಸದಸರಾದ ಶೇಖರ ಕುಕ್ಕೇಡಿ, ನಮಿತಾ, ತಾ.ಪಂ ಸದಸ್ಯ ಪ್ರವೀಣ್ ಗೌಡ, ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್, ಮುಖಂಡರಾದ ಶೈಲೇಶ್ ಕುಮಾರ್, ಕೇಶವ ಬೆಳಾಲು, ಈಶ್ವರ ಭಟ್, ಅಶ್ರಫ್ ನೆರಿಯ, ಹರೀಶ ಗೌಡ ಬಂದಾರು, ಲೋಕೇಶ್ವರೀ ವಿನಯಚಂದ್ರ, ಸುಂದರ ಗೌಡ, ಜೆಸೀಂತಾ ಮೋನಿಸ್, ವಿನ್ಸೆಂಟ್ ಮಡಂತ್ಯಾರು, ಅಬ್ದುಲ್ ರಹಿಮಾನ್ ಪಡ್ಪು, ರಮೇಶ ಪೂಜಾರಿ, ಮೆಹಬೂಬ್ ಬೆಳ್ತಂಗಡಿ, ಪ್ರಭಾಕರ ಓಡಿಲ್ನಾಳ, ಅನೂಪ್ ಪಾಯಸ್,ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

2 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

3 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

4 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

16 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

19 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 day ago