Advertisement
ಸುದ್ದಿಗಳು

ಬೆಳ್ಮ ಸೇವಾಶ್ರಮದಲ್ಲಿ ಜ್ಞಾನದೀಪ ಸಂಸ್ಥೆಯಿಂದ ದೀಪಾವಳಿ ಆಚರಣೆ

Share

ಮಂಗಳೂರು: ದೇರಳಕಟ್ಟೆ ಸಮೀಪದ ಬೆಳ್ಮ ಸೇವಾಶ್ರಮದಲ್ಲಿ ಸುಳ್ಯ ಮತ್ತು ಬೆಳ್ಳಾರೆಯಲ್ಲಿ ಕಾರ್ಯರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ, ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಪರಿತ್ಯಕ್ತ ತಾಯಂದಿರ ಜೊತೆ ಬೆರೆತು ವಿಶಿಷ್ಟ ರೀತಿಯಲ್ಲಿ ದೀಪಾವಳಿ ಆಚರಿಸಿಕೊಂಡರು.

Advertisement
Advertisement
Advertisement
Advertisement
Advertisement

ವೃದ್ಧ ಅನಾಥ ತಾಯಂದಿರಿಗೆ ಉಚಿತ ಸೇವಾಶ್ರಮ ನಡೆಸುತ್ತಿರುವ ಬೆಳ್ಮ ಸೇವಾಶ್ರಮದಲ್ಲಿ ಸೋಮವಾರ ಹಬ್ಬದ ವಾತಾವರಣ. ಜ್ಞಾನದೀಪ ಸಂಸ್ಥೆಯ ವಿದ್ಯಾರ್ಥಿಗಳು ಆಶ್ರಮದಲ್ಲಿರುವ ತಾಯಂದಿರ ಜೊತೆ ಬೆರೆತು ದೀಪಾವಳಿ ಆಚರಿಸಿದರು. ವಿದ್ಯಾರ್ಥಿಗಳು ರಂಗೋಲಿ ಬಿಡಿಸಿ, ಹಣತೆ ಹಚ್ಚಿದರು. ಆಶ್ರಮದಲ್ಲಿರುವ ವಯೋವೃದ್ಧರ ಜೊತೆ ಕುಶಲೋಪರಿ ನಡೆಸಿ, ಸಹಭೋಜನ ಮಾಡಿ, ಹಣ್ಣು ಹಂಪಲು ವಿತರಿಸಿ ಬದುಕಿನ ಶಿಕ್ಷಣ ಪಡೆದರು.

Advertisement

ಆಶ್ರಮದ ಮ್ಯಾನೇಂಜಿಂಗ್ ಟ್ರಸ್ಟಿ ಜಿ.ಆರ್ ಶೆಟ್ಟಿ ಮತ್ತು ಟ್ರಸ್ಟಿ ಶ್ಯಾಮಲಾ ಶೆಟ್ಟಿ ದೀಪ ಬೆಳಗುವುದರ ಮೂಲಕ ದೀಪಾವಳಿ ಆಚರಣೆಯನ್ನು ಉದ್ಘಾಟಿಸಿದರು. ಆಶ್ರಮದ ಮೇಲ್ವಿಚಾರಕ ಬಾಲಕೃಷ್ಣ, ಉಪನ್ಯಾಸಕರುಗಳಾದ ಶಿವಪ್ರಸಾದ್, ಜಲಜಾ, ಅಮಿತಾ ವೈ ಶೆಟ್ಟಿ, ದಿವ್ಯಾ, ದೀಪ್ತಿ, ಸೌಮ್ಯಾ, ಮೌಸಮಿ, ವಿದ್ಯಾರ್ಥಿ ನಾಯಕ ಸುಮಿತ್ ಕರ್ಕೆರ, ಸಂಸ್ಥೆಯ ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷೆ ಯಶ್ಮಿತಾ, ಸಂತೋಷ್ ನಾಯಕ್ ಕೊಡಿಯಾಲ ಉಪಸ್ಥಿತರಿದ್ದರು.

ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಪ್ರಸ್ತಾವಿಸಿ,ಸ್ವಾಗತಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ಜ್ಞಾನದೀಪ ಸಂಸ್ಥೆಯ ಸಿಬಂದಿ ವರ್ಗದವರು ಸೇರಿದಂತೆ ಸಂಸ್ಥೆಯ ಬೆಳ್ಳಾರೆ ಮತ್ತು ಸುಳ್ಯದ ವಿದ್ಯಾರ್ಥಿಗಳು ದೀಪಾವಳಿ ಆಚರಣೆಯಲ್ಲಿ ಭಾಗವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

1 hour ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

3 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago