ಬೆಳ್ಳಾರೆ: ಕಲ್ಮಡ್ಕದ ಬಾಬ್ಬಿ ಫಿಷರ್ ಚೆಸ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನಗಂಗಾ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯುತ್ತಿರುವ ಜಿಲ್ಲಾಮಟ್ಟದ ಚೆಸ್ ಟೂರ್ನಮೆಂಟ್ ನ್ನು ಮಾಜಿ ರಾಜ್ಯ ಚೆಸ್ ಚಾಂಪಿಯನ್ ಶ್ರೀ ರಾಮ ಕೋಟೆ ಉದ್ಘಾಟಿಸಿದರು.
ಅಸೋಸಿಯೇಷನ್ ಅಧ್ಯಕ್ಷ ವಿ ಮೋಹನ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಚೊಕ್ಕಾಡಿ ಪ್ರೌಢಶಾಲಾ ನಿವೃತ್ತ ಮುಖ್ಯಗುರುಗಳಾದ ವಿ ಸುಬ್ರಾಯ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ದೇಚಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಮುರಳಿ ಕೃಷ್ಣ ಚಳ್ಳಂಗಾರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನೂರಕ್ಕೂ ಅಧಿಕ ಸ್ಪರ್ಧಾಳುಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸುತ್ತಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




