Advertisement
ಸುದ್ದಿಗಳು

ಬೆಳ್ಳಾರೆಯಲ್ಲಿ ಮೆಸ್ಕಾಂ ಉಪ ವಿಭಾಗ ಕಚೇರಿ ಆರಂಭಿಸಲು ಒತ್ತಾಯ

Share

ಬೆಳ್ಳಾರೆ: ಸುಳ್ಯ ಉಪವಿಭಾಗದ ಬೆಳ್ಳಾರೆಯ ಮೆಸ್ಕಾಂ ಶಾಖಾ ಕಚೇರಿಯನ್ನು ಮೇಲ್ದರ್ಜೆಗೇರಿಸಿ ಉಪ ವಿಭಾಗ (ನಿರ್ವಹಣೆ ಮತ್ತು ಪಾಲನೆ)ಕಚೇರಿಯನ್ನು ಮಂಜೂರು ಮಾಡಿ ಆರಂಭಿಸಲು ಬಳಕೆದಾರರ ವೇದಿಕೆ ಬೆಳ್ಳಾರೆ ಇದರ ಸಂಚಾಲಕ ಜಯಪ್ರಸಾದ್ ಜೋಶಿ ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದ  ಆಡಳಿತ ಕಚೇರಿಯಲ್ಲಿ ಕಾರ್ಯ ನಿರ್ವಾಹಕ ನಿರ್ದೇಶಕರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಈ  ಸಂದರ್ಭ ಮೆಸ್ಕಾಂ ಹಣಕಾಸು ನಿಯಂತ್ರಕರು ಮತ್ತು ಮುಖ್ಯ ಪ್ರಬಂಧಕರು ಕೂಡಾ ಉಪಸ್ಥಿತರಿದ್ದು ಮನವಿಗೆ ಪೂರಕ ಸ್ಪಂದನೆ ನೀಡಿದರು.

ಮನವಿಯಲ್ಲಿ ಬೆಳ್ಳಾರೆಯಲ್ಲಿ ಸೆಕ್ಷನ್ ಕಚೇರಿ 2003 ರಲ್ಲಿ ಆರಂಭವಾಗಿದ್ದು ಹಾಲಿ ಬೆಳ್ಳಾರೆಯ ಸೆಕ್ಷನ್ ಕಚೇರಿ ವ್ಯಾಪ್ತಿ ಅತೀ ದೊಡ್ಡದಾಗಿ ವಿಶಾಲವಾಗಿದ್ದು ಶಾಖಾ ಕಚೇರಿ ಮಾತ್ರದಿಂದ ಆಡಳಿತ ಮತ್ತು ನಿರ್ವಹಣೆ ಕಷ್ಟಕರವಾಗಿರುತ್ತದೆ. ಬೆಳ್ಳಾರೆಯಲ್ಲಿ ಉಪ ವಿಭಾಗ ಆರಂಭಿಸಿದಲ್ಲಿ ನಿರ್ವಹಣೆ ಸುಗಮವಾಗಿ ಗ್ರಾಹಕರ ಕುಂದು ಕೊರತೆಗಳ ನಿವಾರಣೆಯಾಗಿ ಆಡಳಿತ ದೃಷ್ಟಿಯಿಂದಲೂ ಬಹಳಷ್ಟು ಅನುಕೂಲವಾಗಲಿದೆ. ಪ್ರಸ್ಥಾವಿತ ಬೆಳ್ಳಾರೆ ಉಪ ವಿಭಾಗಕ್ಕೆ ಬೆಳ್ಳಾರೆ ಅಲ್ಲದೆ ಐವರ್ನಾಡು ಮತ್ತು ನಿಂತಿಕಲ್ ಶಾಖಾ ಕಚೇರಿಗಳನ್ನು ಸೃಜಿಸಿ ಬೆಳ್ಳಾರೆ ಉಪ ವಿಭಾಗ ಆರಂಭಿಸಿದಲ್ಲಿ ಎಲ್ಲಾ ದೃಷ್ಟಿಯಿಂದಲೂ ಅನುಕೂಲವಾಗಲಿದೆ. ಈಗ ಬೆಳ್ಳಾರೆಗೆ ಹತ್ತಿರದ ಕಲ್ಮಡ್ಕ ಇತ್ಯಾದಿ ಗ್ರಾಮಗಳನ್ನು ಕೂಡಾ ದೂರದ ಸುಬ್ರಹ್ಮಣ್ಯಕ್ಕೆ ಸೇರಿಸಿದ್ದು ಅಲ್ಲಿನ ಗ್ರಾಹಕರೂ ಬೆಳ್ಳಾರೆ ವ್ಯಾಪ್ತಿಗೆ ಮರು ಸೇರ್ಪಡೆ ಮಾಡಬೇಕೆಂದು  ಮನವಿಯಲ್ಲಿ ಆಗ್ರಹಿಸಿದ್ದಾರೆ. ಬೆಳ್ಳಾರೆ ಉಪ ವಿಭಾಗ ಆರಂಭಿಸಿದಲ್ಲಿ ಈ ಸಮಸ್ಯೆಯೂ ಪರಿಹಾರವಾಗಲಿದೆ.

ಬೆಳ್ಳಾರೆಯಲ್ಲಿ 33/11 ವಿದ್ಯುತ್ ವಿತರಣ ಕೇಂದ್ರವೂ ಕಾರ್ಯಾಚರಿಸುತ್ತಿರುವುದಲ್ಲದೆ ಮಾಡಾವು 110/33 ಕೆ.ವಿ. ಕೇಂದ್ರವೂ ಆರಂಭವಾಗಲಿದ್ದು ಸುಗಮ ವಿದ್ಯುತ್ ವಿತರಣೆ ನಿಟ್ಟಿನಲ್ಲಿ ಬೆಳ್ಳಾರೆ ಬಹು ಪ್ರಾಮುಖ್ಯ ಕೇಂದ್ರವಾಗಲಿದೆ. ಆ ಕಾರಣದಲ್ಲೂ ಬೆಳ್ಳಾರೆಗೆ ಉಪ ವಿಭಾಗ ಕಚೇರಿ ಅತೀ ಅಗತ್ಯ. ಸುಳ್ಯ, ಕಡಬ, ಸುಬ್ರಹ್ಮಣ್ಯ, ಕುಂಬ್ರ ಉಪ ವಿಭಾಗಗಳಲ್ಲಿ ಒತ್ತಡ ಹೆಚ್ಚಿದ್ದು ಬೆಳ್ಳಾರೆ ಸಮೀಪದ ಅಲ್ಲಿನ ವ್ಯಾಪ್ತಿಗಳನ್ನು ಪ್ರಸ್ಥಾವಿತ ಬೆಳ್ಳಾರೆಗೆ ಸೇರಿಸಿದಲ್ಲಿ ಅಲ್ಲಿಯೂ ಹೊರೆ ಕಮ್ಮಿ ಆಗಿ ದಕ್ಷತೆ ಸುಧಾರಿಸುವುದಲ್ಲದೆ ಆಡಳಿತ ಮತ್ತು ನಿರ್ವಹಣೆ ಸುಗಮವಾಗಿ ಅನುಕೂಲಕರವಾಗಲಿದೆ.

ಹೀಗಾಗಿ  ಮೆಸ್ಕಾಂ ಮತ್ತು ಗ್ರಾಹಕರ ಹಿತ ದೃಷ್ಟಿ ಹಾಗೂ ಭವಿಷ್ಯದ ಬೆಳವಣಿಗೆ ಇತ್ಯಾದಿಗಳನ್ನು ಗಮನದಲ್ಲಿಟ್ಟುಕೊಂಡು ಬೆಳ್ಳಾರೆಯ ಶಾಖಾ ಕಚೇರಿಯನ್ನು ಮೇಲ್ದರ್ಜೆಗೇರಿಸಿ, ಉಪ ವಿಭಾಗ (ನಿರ್ವಹಣೆ ಮತ್ತು ಪಾಲನೆ)ಕಚೇರಿಯನ್ನು ಆರಂಭಿಸಿ ಗ್ರಾಹಕ ಸ್ನೇಹಿ ವ್ಯವಸ್ಥೆ ಜಾರಿಗೊಳಿಸಬೇಕಾಗಿ ಮನವಿಯಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

23 minutes ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

1 hour ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

15 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

16 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

17 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

17 hours ago