ಬೆಳ್ಳಾರೆಯಲ್ಲಿ ರುದ್ರಭೂಮಿಗೆ ತಹಶೀಲ್ದಾರರಿಂದ ಸ್ಥಳ ವೀಕ್ಷಣೆ

July 8, 2019
4:00 PM

ಬೆಳ್ಳಾರೆ : ಬೆಳ್ಳಾರೆ ಭಾಗದ ಸಾರ್ವಜನಿಕರ ಬಹು ಕಾಲದಿಂದ ಇದ್ದ ರುದ್ರಭೂಮಿಯ ಅಲಭ್ಯತೆಯ ಕೊರತೆಯನ್ನು ಬೆಳ್ಳಾರೆಯ ಸಾಮಾಜಿಕ ಮುಖಂಡರು ಹಾಗು ಗ್ರಾಮ ಪಂಚಾಯತ್ ಆಡಳಿತ ವರ್ಗದವರು ಸುಳ್ಯ ತಹಶೀಲ್ದಾರ ಕುಂಞ ಅಹಮ್ಮದ್ ಅವರ ಗಮನಕ್ಕೆ ಕೆಲವು ಸಮಯದ ಹಿಂದೆ ತಂದಿದ್ದರು.
ಬೆಳ್ಳಾರೆಗೆ ಭೇಟಿ ನೀಡಿದ್ದ ಸಂದರ್ಭ ತಹಶೀಲ್ದಾರ ಕುಂಞ ಅಹಮ್ಮದ್ ಅವರು ಬಹಳ ವರ್ಷಗಳ ಹಿಂದೆ ಬೆಳ್ಳಾರೆ ಭಾಗದಲ್ಲಿ ಅಸ್ಥಿತ್ವದಲ್ಲಿದ್ದ ರುದ್ರಭೂಮಿಯನ್ನು ಮರುನವೀಕರಣಗೊಳಿಸುವ ಸಲುವಾಗಿ ಸ್ಥಳ ವೀಕ್ಷಣೆ ನಡೆಸಿದರು. ಸ್ಥಳಕ್ಕೆ ಅಗತ್ಯವಿರುವ ಸೌಲಭ್ಯಗಳ ಕುರಿತು ಅಳವಡಿಕೆಗೆ ಆದೇಶಿಸಿ, ಸ್ಥಳದಲ್ಲಿದ್ದ ಕೆಲವು ಕುಂದುಕೊರತೆಗಳನ್ನು ನಿವಾರಿಸಲು ಬೆಳ್ಳಾರೆ ಗ್ರಾಮ ಪಂಚಾಯತ್‍ಗೆ ಸೂಚಿಸಿದರು.
ಬಹಳ ವರ್ಷಗಳ ಹಿಂದೆ ವಾಸ್ತು ಹಾಗು ಜೋತಿಷ್ಯ ಶಾಸ್ತ್ರಜ್ಞರ ಅಣತಿಯಂತೆ ಬೆಳ್ಳಾರೆ ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದ ಈಶಾನ್ಯ ಅಭಿಮುಖವಾಗಿ ರುದ್ರಭೂಮಿ ಇರಬೇಕೆಂಬ ಕಾರಣಕ್ಕಾಗಿ ನಿರ್ಮಿಸಲಾಗಿತ್ತೆಂದು ತಿಳಿದು ಬಂದಿದೆ. ಬೆಳ್ಳಾರೆ ಗ್ರಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್, ಉಪಾಧ್ಯಕ್ಷ ಮುಸ್ತಾಫಾ ಬೆಳ್ಳಾರೆ, ಸದಸ್ಯ ನವೀನ್ ರೈ ತಂಬಿನಮಕ್ಕಿ, ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಸುಂದರ ಪಾಟಾಜೆ, ಜಯರಾಮ್ ಉಮಿಕ್ಕಳ, ರಾಮ ಲೆಕ್ಕಾಧಿಕರಿ ವಸುಧಾ ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror