ಸುದ್ದಿಗಳು

ಬೆಳ್ಳಾರೆಯಲ್ಲಿ ರುದ್ರಭೂಮಿಗೆ ತಹಶೀಲ್ದಾರರಿಂದ ಸ್ಥಳ ವೀಕ್ಷಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ : ಬೆಳ್ಳಾರೆ ಭಾಗದ ಸಾರ್ವಜನಿಕರ ಬಹು ಕಾಲದಿಂದ ಇದ್ದ ರುದ್ರಭೂಮಿಯ ಅಲಭ್ಯತೆಯ ಕೊರತೆಯನ್ನು ಬೆಳ್ಳಾರೆಯ ಸಾಮಾಜಿಕ ಮುಖಂಡರು ಹಾಗು ಗ್ರಾಮ ಪಂಚಾಯತ್ ಆಡಳಿತ ವರ್ಗದವರು ಸುಳ್ಯ ತಹಶೀಲ್ದಾರ ಕುಂಞ ಅಹಮ್ಮದ್ ಅವರ ಗಮನಕ್ಕೆ ಕೆಲವು ಸಮಯದ ಹಿಂದೆ ತಂದಿದ್ದರು.
ಬೆಳ್ಳಾರೆಗೆ ಭೇಟಿ ನೀಡಿದ್ದ ಸಂದರ್ಭ ತಹಶೀಲ್ದಾರ ಕುಂಞ ಅಹಮ್ಮದ್ ಅವರು ಬಹಳ ವರ್ಷಗಳ ಹಿಂದೆ ಬೆಳ್ಳಾರೆ ಭಾಗದಲ್ಲಿ ಅಸ್ಥಿತ್ವದಲ್ಲಿದ್ದ ರುದ್ರಭೂಮಿಯನ್ನು ಮರುನವೀಕರಣಗೊಳಿಸುವ ಸಲುವಾಗಿ ಸ್ಥಳ ವೀಕ್ಷಣೆ ನಡೆಸಿದರು. ಸ್ಥಳಕ್ಕೆ ಅಗತ್ಯವಿರುವ ಸೌಲಭ್ಯಗಳ ಕುರಿತು ಅಳವಡಿಕೆಗೆ ಆದೇಶಿಸಿ, ಸ್ಥಳದಲ್ಲಿದ್ದ ಕೆಲವು ಕುಂದುಕೊರತೆಗಳನ್ನು ನಿವಾರಿಸಲು ಬೆಳ್ಳಾರೆ ಗ್ರಾಮ ಪಂಚಾಯತ್‍ಗೆ ಸೂಚಿಸಿದರು.
ಬಹಳ ವರ್ಷಗಳ ಹಿಂದೆ ವಾಸ್ತು ಹಾಗು ಜೋತಿಷ್ಯ ಶಾಸ್ತ್ರಜ್ಞರ ಅಣತಿಯಂತೆ ಬೆಳ್ಳಾರೆ ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದ ಈಶಾನ್ಯ ಅಭಿಮುಖವಾಗಿ ರುದ್ರಭೂಮಿ ಇರಬೇಕೆಂಬ ಕಾರಣಕ್ಕಾಗಿ ನಿರ್ಮಿಸಲಾಗಿತ್ತೆಂದು ತಿಳಿದು ಬಂದಿದೆ. ಬೆಳ್ಳಾರೆ ಗ್ರಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್, ಉಪಾಧ್ಯಕ್ಷ ಮುಸ್ತಾಫಾ ಬೆಳ್ಳಾರೆ, ಸದಸ್ಯ ನವೀನ್ ರೈ ತಂಬಿನಮಕ್ಕಿ, ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಸುಂದರ ಪಾಟಾಜೆ, ಜಯರಾಮ್ ಉಮಿಕ್ಕಳ, ರಾಮ ಲೆಕ್ಕಾಧಿಕರಿ ವಸುಧಾ ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

8 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

12 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

21 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

21 hours ago