ಬೆಳ್ಳಾರೆ : ಬೆಳ್ಳಾರೆ ಭಾಗದ ಸಾರ್ವಜನಿಕರ ಬಹು ಕಾಲದಿಂದ ಇದ್ದ ರುದ್ರಭೂಮಿಯ ಅಲಭ್ಯತೆಯ ಕೊರತೆಯನ್ನು ಬೆಳ್ಳಾರೆಯ ಸಾಮಾಜಿಕ ಮುಖಂಡರು ಹಾಗು ಗ್ರಾಮ ಪಂಚಾಯತ್ ಆಡಳಿತ ವರ್ಗದವರು ಸುಳ್ಯ ತಹಶೀಲ್ದಾರ ಕುಂಞ ಅಹಮ್ಮದ್ ಅವರ ಗಮನಕ್ಕೆ ಕೆಲವು ಸಮಯದ ಹಿಂದೆ ತಂದಿದ್ದರು.
ಬೆಳ್ಳಾರೆಗೆ ಭೇಟಿ ನೀಡಿದ್ದ ಸಂದರ್ಭ ತಹಶೀಲ್ದಾರ ಕುಂಞ ಅಹಮ್ಮದ್ ಅವರು ಬಹಳ ವರ್ಷಗಳ ಹಿಂದೆ ಬೆಳ್ಳಾರೆ ಭಾಗದಲ್ಲಿ ಅಸ್ಥಿತ್ವದಲ್ಲಿದ್ದ ರುದ್ರಭೂಮಿಯನ್ನು ಮರುನವೀಕರಣಗೊಳಿಸುವ ಸಲುವಾಗಿ ಸ್ಥಳ ವೀಕ್ಷಣೆ ನಡೆಸಿದರು. ಸ್ಥಳಕ್ಕೆ ಅಗತ್ಯವಿರುವ ಸೌಲಭ್ಯಗಳ ಕುರಿತು ಅಳವಡಿಕೆಗೆ ಆದೇಶಿಸಿ, ಸ್ಥಳದಲ್ಲಿದ್ದ ಕೆಲವು ಕುಂದುಕೊರತೆಗಳನ್ನು ನಿವಾರಿಸಲು ಬೆಳ್ಳಾರೆ ಗ್ರಾಮ ಪಂಚಾಯತ್ಗೆ ಸೂಚಿಸಿದರು.
ಬಹಳ ವರ್ಷಗಳ ಹಿಂದೆ ವಾಸ್ತು ಹಾಗು ಜೋತಿಷ್ಯ ಶಾಸ್ತ್ರಜ್ಞರ ಅಣತಿಯಂತೆ ಬೆಳ್ಳಾರೆ ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದ ಈಶಾನ್ಯ ಅಭಿಮುಖವಾಗಿ ರುದ್ರಭೂಮಿ ಇರಬೇಕೆಂಬ ಕಾರಣಕ್ಕಾಗಿ ನಿರ್ಮಿಸಲಾಗಿತ್ತೆಂದು ತಿಳಿದು ಬಂದಿದೆ. ಬೆಳ್ಳಾರೆ ಗ್ರಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್, ಉಪಾಧ್ಯಕ್ಷ ಮುಸ್ತಾಫಾ ಬೆಳ್ಳಾರೆ, ಸದಸ್ಯ ನವೀನ್ ರೈ ತಂಬಿನಮಕ್ಕಿ, ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಸುಂದರ ಪಾಟಾಜೆ, ಜಯರಾಮ್ ಉಮಿಕ್ಕಳ, ರಾಮ ಲೆಕ್ಕಾಧಿಕರಿ ವಸುಧಾ ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…