Advertisement
ಸುದ್ದಿಗಳು

ಬೆಳ್ಳಾರೆಯಲ್ಲಿ ರುದ್ರಭೂಮಿಗೆ ತಹಶೀಲ್ದಾರರಿಂದ ಸ್ಥಳ ವೀಕ್ಷಣೆ

Share

ಬೆಳ್ಳಾರೆ : ಬೆಳ್ಳಾರೆ ಭಾಗದ ಸಾರ್ವಜನಿಕರ ಬಹು ಕಾಲದಿಂದ ಇದ್ದ ರುದ್ರಭೂಮಿಯ ಅಲಭ್ಯತೆಯ ಕೊರತೆಯನ್ನು ಬೆಳ್ಳಾರೆಯ ಸಾಮಾಜಿಕ ಮುಖಂಡರು ಹಾಗು ಗ್ರಾಮ ಪಂಚಾಯತ್ ಆಡಳಿತ ವರ್ಗದವರು ಸುಳ್ಯ ತಹಶೀಲ್ದಾರ ಕುಂಞ ಅಹಮ್ಮದ್ ಅವರ ಗಮನಕ್ಕೆ ಕೆಲವು ಸಮಯದ ಹಿಂದೆ ತಂದಿದ್ದರು.
ಬೆಳ್ಳಾರೆಗೆ ಭೇಟಿ ನೀಡಿದ್ದ ಸಂದರ್ಭ ತಹಶೀಲ್ದಾರ ಕುಂಞ ಅಹಮ್ಮದ್ ಅವರು ಬಹಳ ವರ್ಷಗಳ ಹಿಂದೆ ಬೆಳ್ಳಾರೆ ಭಾಗದಲ್ಲಿ ಅಸ್ಥಿತ್ವದಲ್ಲಿದ್ದ ರುದ್ರಭೂಮಿಯನ್ನು ಮರುನವೀಕರಣಗೊಳಿಸುವ ಸಲುವಾಗಿ ಸ್ಥಳ ವೀಕ್ಷಣೆ ನಡೆಸಿದರು. ಸ್ಥಳಕ್ಕೆ ಅಗತ್ಯವಿರುವ ಸೌಲಭ್ಯಗಳ ಕುರಿತು ಅಳವಡಿಕೆಗೆ ಆದೇಶಿಸಿ, ಸ್ಥಳದಲ್ಲಿದ್ದ ಕೆಲವು ಕುಂದುಕೊರತೆಗಳನ್ನು ನಿವಾರಿಸಲು ಬೆಳ್ಳಾರೆ ಗ್ರಾಮ ಪಂಚಾಯತ್‍ಗೆ ಸೂಚಿಸಿದರು.
ಬಹಳ ವರ್ಷಗಳ ಹಿಂದೆ ವಾಸ್ತು ಹಾಗು ಜೋತಿಷ್ಯ ಶಾಸ್ತ್ರಜ್ಞರ ಅಣತಿಯಂತೆ ಬೆಳ್ಳಾರೆ ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದ ಈಶಾನ್ಯ ಅಭಿಮುಖವಾಗಿ ರುದ್ರಭೂಮಿ ಇರಬೇಕೆಂಬ ಕಾರಣಕ್ಕಾಗಿ ನಿರ್ಮಿಸಲಾಗಿತ್ತೆಂದು ತಿಳಿದು ಬಂದಿದೆ. ಬೆಳ್ಳಾರೆ ಗ್ರಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್, ಉಪಾಧ್ಯಕ್ಷ ಮುಸ್ತಾಫಾ ಬೆಳ್ಳಾರೆ, ಸದಸ್ಯ ನವೀನ್ ರೈ ತಂಬಿನಮಕ್ಕಿ, ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಸುಂದರ ಪಾಟಾಜೆ, ಜಯರಾಮ್ ಉಮಿಕ್ಕಳ, ರಾಮ ಲೆಕ್ಕಾಧಿಕರಿ ವಸುಧಾ ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

38 mins ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

55 mins ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

14 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

14 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

14 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

23 hours ago