Advertisement
ಸುದ್ದಿಗಳು

ಬೆಳ್ಳಾರೆಯಲ್ಲಿ ರುದ್ರಭೂಮಿಗೆ ತಹಶೀಲ್ದಾರರಿಂದ ಸ್ಥಳ ವೀಕ್ಷಣೆ

Share

ಬೆಳ್ಳಾರೆ : ಬೆಳ್ಳಾರೆ ಭಾಗದ ಸಾರ್ವಜನಿಕರ ಬಹು ಕಾಲದಿಂದ ಇದ್ದ ರುದ್ರಭೂಮಿಯ ಅಲಭ್ಯತೆಯ ಕೊರತೆಯನ್ನು ಬೆಳ್ಳಾರೆಯ ಸಾಮಾಜಿಕ ಮುಖಂಡರು ಹಾಗು ಗ್ರಾಮ ಪಂಚಾಯತ್ ಆಡಳಿತ ವರ್ಗದವರು ಸುಳ್ಯ ತಹಶೀಲ್ದಾರ ಕುಂಞ ಅಹಮ್ಮದ್ ಅವರ ಗಮನಕ್ಕೆ ಕೆಲವು ಸಮಯದ ಹಿಂದೆ ತಂದಿದ್ದರು.
ಬೆಳ್ಳಾರೆಗೆ ಭೇಟಿ ನೀಡಿದ್ದ ಸಂದರ್ಭ ತಹಶೀಲ್ದಾರ ಕುಂಞ ಅಹಮ್ಮದ್ ಅವರು ಬಹಳ ವರ್ಷಗಳ ಹಿಂದೆ ಬೆಳ್ಳಾರೆ ಭಾಗದಲ್ಲಿ ಅಸ್ಥಿತ್ವದಲ್ಲಿದ್ದ ರುದ್ರಭೂಮಿಯನ್ನು ಮರುನವೀಕರಣಗೊಳಿಸುವ ಸಲುವಾಗಿ ಸ್ಥಳ ವೀಕ್ಷಣೆ ನಡೆಸಿದರು. ಸ್ಥಳಕ್ಕೆ ಅಗತ್ಯವಿರುವ ಸೌಲಭ್ಯಗಳ ಕುರಿತು ಅಳವಡಿಕೆಗೆ ಆದೇಶಿಸಿ, ಸ್ಥಳದಲ್ಲಿದ್ದ ಕೆಲವು ಕುಂದುಕೊರತೆಗಳನ್ನು ನಿವಾರಿಸಲು ಬೆಳ್ಳಾರೆ ಗ್ರಾಮ ಪಂಚಾಯತ್‍ಗೆ ಸೂಚಿಸಿದರು.
ಬಹಳ ವರ್ಷಗಳ ಹಿಂದೆ ವಾಸ್ತು ಹಾಗು ಜೋತಿಷ್ಯ ಶಾಸ್ತ್ರಜ್ಞರ ಅಣತಿಯಂತೆ ಬೆಳ್ಳಾರೆ ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದ ಈಶಾನ್ಯ ಅಭಿಮುಖವಾಗಿ ರುದ್ರಭೂಮಿ ಇರಬೇಕೆಂಬ ಕಾರಣಕ್ಕಾಗಿ ನಿರ್ಮಿಸಲಾಗಿತ್ತೆಂದು ತಿಳಿದು ಬಂದಿದೆ. ಬೆಳ್ಳಾರೆ ಗ್ರಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್, ಉಪಾಧ್ಯಕ್ಷ ಮುಸ್ತಾಫಾ ಬೆಳ್ಳಾರೆ, ಸದಸ್ಯ ನವೀನ್ ರೈ ತಂಬಿನಮಕ್ಕಿ, ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಸುಂದರ ಪಾಟಾಜೆ, ಜಯರಾಮ್ ಉಮಿಕ್ಕಳ, ರಾಮ ಲೆಕ್ಕಾಧಿಕರಿ ವಸುಧಾ ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

28 mins ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

33 mins ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

36 mins ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

38 mins ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

45 mins ago

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?

ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…

58 mins ago