Advertisement
ಸುದ್ದಿಗಳು

ಬೆಳ್ಳಾರೆಯಲ್ಲಿ ರುದ್ರಭೂಮಿಗೆ ತಹಶೀಲ್ದಾರರಿಂದ ಸ್ಥಳ ವೀಕ್ಷಣೆ

Share

ಬೆಳ್ಳಾರೆ : ಬೆಳ್ಳಾರೆ ಭಾಗದ ಸಾರ್ವಜನಿಕರ ಬಹು ಕಾಲದಿಂದ ಇದ್ದ ರುದ್ರಭೂಮಿಯ ಅಲಭ್ಯತೆಯ ಕೊರತೆಯನ್ನು ಬೆಳ್ಳಾರೆಯ ಸಾಮಾಜಿಕ ಮುಖಂಡರು ಹಾಗು ಗ್ರಾಮ ಪಂಚಾಯತ್ ಆಡಳಿತ ವರ್ಗದವರು ಸುಳ್ಯ ತಹಶೀಲ್ದಾರ ಕುಂಞ ಅಹಮ್ಮದ್ ಅವರ ಗಮನಕ್ಕೆ ಕೆಲವು ಸಮಯದ ಹಿಂದೆ ತಂದಿದ್ದರು.
ಬೆಳ್ಳಾರೆಗೆ ಭೇಟಿ ನೀಡಿದ್ದ ಸಂದರ್ಭ ತಹಶೀಲ್ದಾರ ಕುಂಞ ಅಹಮ್ಮದ್ ಅವರು ಬಹಳ ವರ್ಷಗಳ ಹಿಂದೆ ಬೆಳ್ಳಾರೆ ಭಾಗದಲ್ಲಿ ಅಸ್ಥಿತ್ವದಲ್ಲಿದ್ದ ರುದ್ರಭೂಮಿಯನ್ನು ಮರುನವೀಕರಣಗೊಳಿಸುವ ಸಲುವಾಗಿ ಸ್ಥಳ ವೀಕ್ಷಣೆ ನಡೆಸಿದರು. ಸ್ಥಳಕ್ಕೆ ಅಗತ್ಯವಿರುವ ಸೌಲಭ್ಯಗಳ ಕುರಿತು ಅಳವಡಿಕೆಗೆ ಆದೇಶಿಸಿ, ಸ್ಥಳದಲ್ಲಿದ್ದ ಕೆಲವು ಕುಂದುಕೊರತೆಗಳನ್ನು ನಿವಾರಿಸಲು ಬೆಳ್ಳಾರೆ ಗ್ರಾಮ ಪಂಚಾಯತ್‍ಗೆ ಸೂಚಿಸಿದರು.
ಬಹಳ ವರ್ಷಗಳ ಹಿಂದೆ ವಾಸ್ತು ಹಾಗು ಜೋತಿಷ್ಯ ಶಾಸ್ತ್ರಜ್ಞರ ಅಣತಿಯಂತೆ ಬೆಳ್ಳಾರೆ ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದ ಈಶಾನ್ಯ ಅಭಿಮುಖವಾಗಿ ರುದ್ರಭೂಮಿ ಇರಬೇಕೆಂಬ ಕಾರಣಕ್ಕಾಗಿ ನಿರ್ಮಿಸಲಾಗಿತ್ತೆಂದು ತಿಳಿದು ಬಂದಿದೆ. ಬೆಳ್ಳಾರೆ ಗ್ರಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್, ಉಪಾಧ್ಯಕ್ಷ ಮುಸ್ತಾಫಾ ಬೆಳ್ಳಾರೆ, ಸದಸ್ಯ ನವೀನ್ ರೈ ತಂಬಿನಮಕ್ಕಿ, ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಸುಂದರ ಪಾಟಾಜೆ, ಜಯರಾಮ್ ಉಮಿಕ್ಕಳ, ರಾಮ ಲೆಕ್ಕಾಧಿಕರಿ ವಸುಧಾ ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

4 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

4 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

12 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

13 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

22 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

22 hours ago